April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

ಆರಂಬೋಡಿ : ಇಲ್ಲಿಯ ಪಿಲಿಕಜೆಯ ನಿವಾಸಿ ಶ್ರೀಮತಿ ಮಮತಾ(45ವ) ಅವರು ಅ.13 ರಂದು ಮನೆಯಿಂದ ನಾಪತ್ತೆಯಾಗಿದ್ದು, ಅವರ ಮೃತ ದೇಹವು ಬಾವಿಯಲ್ಲಿ ಮರುದಿನ ಪತ್ತೆಯಾದ ಘಟನೆ ಅ.14 ರಂದು ನಡೆದಿದೆ.

ಘಟನೆ ವಿವರ: ಆರಂಬೋಡಿ ಗ್ರಾಮದ ಪಿಲಿಕಜೆ ನಿವಾಸಿ ಶ್ರೀಧರ ಪೂಜಾರಿ ಅವರು ಸುಮಾರು 7 ವರ್ಷಗಳ ಹಿಂದೆ ಪಾರ್ಶ್ವವಾಯು ಖಾಯಿಲೆಗೆ ತುತ್ತಾಗಿದ್ದು ಎಡಕೈ ಹಾಗೂ ಎಡಕಾಲಿನ ಸ್ವಾಧಿನತೆ ಕಳೆದುಕೊಂಡು ಮನೆಯಲ್ಲೆ ಇದ್ದಾರೆ. ಇವರ ಪತ್ನಿ ಶ್ರೀಮತಿ ಮಮತಾರವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದವರು ಚಿಕಿತ್ಸೆಯಲ್ಲಿ ಪಡೆಯುತ್ತಿದ್ದರು. ಅ.13 ರಂದು ಬೆಳಗಿನ ಉಪಹಾರದ ಬಳಿಕ ಶ್ರೀಮತಿ ಮಮತಾ ರವರು ಮನೆಯಿಂದ ನಾಪತ್ತೆಯಾಗಿದ್ದರು. ಮನೆಯವರು ಹಾಗೂ ನೆರೆ-ಹೊರೆಯವರು ಎಲ್ಲ ಕಡೆ ಹುಡುಕಾಡಿದರೂ ,ಆ ದಿನ ರಾತ್ರಿಯಾದರೂ ಪತ್ತೆಯಾಗಿಲ್ಲ , ಮರುದಿನ ಅ. 14 ರಂದು ಬೆಳಿಗ್ಗೆ ಹುಡುಕಾಡುತ್ತಿರುವ ಸಮಯ ಅವರ ಮೃತ ದೇಹವು ಮನೆಯ ಅಂಗಳದಲ್ಲಿ ಇರುವ ಕುಡಿಯುವ ನೀರಿನ ಬಾವಿಯಲ್ಲಿ ಪತ್ತೆಯಾಗಿದೆ.

ಶ್ರೀಮತಿ ಮಮತಾರವರಿಗೆ ಇದ್ದ ಮಾನಸಿಕ ಖಾಯಿಲೆಯಿಂದ ಹಾಗೂ ಅವರ ಗಂಡನಿಗೆ ಇರುವ ಪಾರ್ಶ್ವವಾಯು ಖಾಯಿಲೆಯಿಂದ ಬೇಸತ್ತು ಮಮತಾರವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಬಾವಿಗೆ ಹಾರಿದ್ದು, ಉಸಿರುಗಟ್ಟಿ ಮೃತ ಪಟ್ಟಿದ್ದಾರೆ. ಈ ಬಗ್ಗೆ ಮೃತರ ಪುತ್ರ ಶ್ರೀಕಾಂತ್ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹದಿಮೂರನೇ ಸುತ್ತಿನಲ್ಲಿ 13162 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ

Suddi Udaya

ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15,16,17 ರಂದು ವೇಣೂರು, ಬೆಳ್ತಂಗಡಿ,ಉಜಿರೆ ರಾಜ ಮಾರ್ಗದಲ್ಲಿ ಸಾಗಲಿದೆ ಗೋ ರಥಯಾತ್ರೆ

Suddi Udaya

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya
error: Content is protected !!