24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

ಆರಂಬೋಡಿ : ಇಲ್ಲಿಯ ಪಿಲಿಕಜೆಯ ನಿವಾಸಿ ಶ್ರೀಮತಿ ಮಮತಾ(45ವ) ಅವರು ಅ.13 ರಂದು ಮನೆಯಿಂದ ನಾಪತ್ತೆಯಾಗಿದ್ದು, ಅವರ ಮೃತ ದೇಹವು ಬಾವಿಯಲ್ಲಿ ಮರುದಿನ ಪತ್ತೆಯಾದ ಘಟನೆ ಅ.14 ರಂದು ನಡೆದಿದೆ.

ಘಟನೆ ವಿವರ: ಆರಂಬೋಡಿ ಗ್ರಾಮದ ಪಿಲಿಕಜೆ ನಿವಾಸಿ ಶ್ರೀಧರ ಪೂಜಾರಿ ಅವರು ಸುಮಾರು 7 ವರ್ಷಗಳ ಹಿಂದೆ ಪಾರ್ಶ್ವವಾಯು ಖಾಯಿಲೆಗೆ ತುತ್ತಾಗಿದ್ದು ಎಡಕೈ ಹಾಗೂ ಎಡಕಾಲಿನ ಸ್ವಾಧಿನತೆ ಕಳೆದುಕೊಂಡು ಮನೆಯಲ್ಲೆ ಇದ್ದಾರೆ. ಇವರ ಪತ್ನಿ ಶ್ರೀಮತಿ ಮಮತಾರವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದವರು ಚಿಕಿತ್ಸೆಯಲ್ಲಿ ಪಡೆಯುತ್ತಿದ್ದರು. ಅ.13 ರಂದು ಬೆಳಗಿನ ಉಪಹಾರದ ಬಳಿಕ ಶ್ರೀಮತಿ ಮಮತಾ ರವರು ಮನೆಯಿಂದ ನಾಪತ್ತೆಯಾಗಿದ್ದರು. ಮನೆಯವರು ಹಾಗೂ ನೆರೆ-ಹೊರೆಯವರು ಎಲ್ಲ ಕಡೆ ಹುಡುಕಾಡಿದರೂ ,ಆ ದಿನ ರಾತ್ರಿಯಾದರೂ ಪತ್ತೆಯಾಗಿಲ್ಲ , ಮರುದಿನ ಅ. 14 ರಂದು ಬೆಳಿಗ್ಗೆ ಹುಡುಕಾಡುತ್ತಿರುವ ಸಮಯ ಅವರ ಮೃತ ದೇಹವು ಮನೆಯ ಅಂಗಳದಲ್ಲಿ ಇರುವ ಕುಡಿಯುವ ನೀರಿನ ಬಾವಿಯಲ್ಲಿ ಪತ್ತೆಯಾಗಿದೆ.

ಶ್ರೀಮತಿ ಮಮತಾರವರಿಗೆ ಇದ್ದ ಮಾನಸಿಕ ಖಾಯಿಲೆಯಿಂದ ಹಾಗೂ ಅವರ ಗಂಡನಿಗೆ ಇರುವ ಪಾರ್ಶ್ವವಾಯು ಖಾಯಿಲೆಯಿಂದ ಬೇಸತ್ತು ಮಮತಾರವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಬಾವಿಗೆ ಹಾರಿದ್ದು, ಉಸಿರುಗಟ್ಟಿ ಮೃತ ಪಟ್ಟಿದ್ದಾರೆ. ಈ ಬಗ್ಗೆ ಮೃತರ ಪುತ್ರ ಶ್ರೀಕಾಂತ್ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

Suddi Udaya

ಪಡಂಗಡಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ-ಸಾಧಕರಿಗೆ ಗೌರವ ಸನ್ಮಾನ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಡಿ.26-27: ಬಳಂಜ ಬದಿನಡೆ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya
error: Content is protected !!