July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

ಆರಂಬೋಡಿ : ಇಲ್ಲಿಯ ಪಿಲಿಕಜೆಯ ನಿವಾಸಿ ಶ್ರೀಮತಿ ಮಮತಾ(45ವ) ಅವರು ಅ.13 ರಂದು ಮನೆಯಿಂದ ನಾಪತ್ತೆಯಾಗಿದ್ದು, ಅವರ ಮೃತ ದೇಹವು ಬಾವಿಯಲ್ಲಿ ಮರುದಿನ ಪತ್ತೆಯಾದ ಘಟನೆ ಅ.14 ರಂದು ನಡೆದಿದೆ.

ಘಟನೆ ವಿವರ: ಆರಂಬೋಡಿ ಗ್ರಾಮದ ಪಿಲಿಕಜೆ ನಿವಾಸಿ ಶ್ರೀಧರ ಪೂಜಾರಿ ಅವರು ಸುಮಾರು 7 ವರ್ಷಗಳ ಹಿಂದೆ ಪಾರ್ಶ್ವವಾಯು ಖಾಯಿಲೆಗೆ ತುತ್ತಾಗಿದ್ದು ಎಡಕೈ ಹಾಗೂ ಎಡಕಾಲಿನ ಸ್ವಾಧಿನತೆ ಕಳೆದುಕೊಂಡು ಮನೆಯಲ್ಲೆ ಇದ್ದಾರೆ. ಇವರ ಪತ್ನಿ ಶ್ರೀಮತಿ ಮಮತಾರವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದವರು ಚಿಕಿತ್ಸೆಯಲ್ಲಿ ಪಡೆಯುತ್ತಿದ್ದರು. ಅ.13 ರಂದು ಬೆಳಗಿನ ಉಪಹಾರದ ಬಳಿಕ ಶ್ರೀಮತಿ ಮಮತಾ ರವರು ಮನೆಯಿಂದ ನಾಪತ್ತೆಯಾಗಿದ್ದರು. ಮನೆಯವರು ಹಾಗೂ ನೆರೆ-ಹೊರೆಯವರು ಎಲ್ಲ ಕಡೆ ಹುಡುಕಾಡಿದರೂ ,ಆ ದಿನ ರಾತ್ರಿಯಾದರೂ ಪತ್ತೆಯಾಗಿಲ್ಲ , ಮರುದಿನ ಅ. 14 ರಂದು ಬೆಳಿಗ್ಗೆ ಹುಡುಕಾಡುತ್ತಿರುವ ಸಮಯ ಅವರ ಮೃತ ದೇಹವು ಮನೆಯ ಅಂಗಳದಲ್ಲಿ ಇರುವ ಕುಡಿಯುವ ನೀರಿನ ಬಾವಿಯಲ್ಲಿ ಪತ್ತೆಯಾಗಿದೆ.

ಶ್ರೀಮತಿ ಮಮತಾರವರಿಗೆ ಇದ್ದ ಮಾನಸಿಕ ಖಾಯಿಲೆಯಿಂದ ಹಾಗೂ ಅವರ ಗಂಡನಿಗೆ ಇರುವ ಪಾರ್ಶ್ವವಾಯು ಖಾಯಿಲೆಯಿಂದ ಬೇಸತ್ತು ಮಮತಾರವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಬಾವಿಗೆ ಹಾರಿದ್ದು, ಉಸಿರುಗಟ್ಟಿ ಮೃತ ಪಟ್ಟಿದ್ದಾರೆ. ಈ ಬಗ್ಗೆ ಮೃತರ ಪುತ್ರ ಶ್ರೀಕಾಂತ್ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ

Suddi Udaya

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

Suddi Udaya

 ಜು. 4 : ವೇಣೂರಿನಲ್ಲಿ ಯಕ್ಷಗಾನ ತರಗತಿ ಆರಂಭ

Suddi Udaya

ನೆರಿಯ: 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya
error: Content is protected !!