25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯಕ್ಷೇತ್ರದಲ್ಲಿ ‘ಬೆಳಕು’ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

ಇಂದಬೆಟ್ಟು; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯಕ್ಷೇತ್ರದಲ್ಲಿ ಬೆಳಕು ಎಂಬ ನಾಮಕರಣದೊಂದಿಗೆ ಹೊಸ ಜ್ಞಾನವಿಕಾಸ ಕೇಂದ್ರವನ್ನು ತಾಲೂಕು ಪಂಚಾಯತ್ ಮಾಜಿ ಸದಸ್ಯರು ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ಸೌಮ್ಯಲತರವರು ಉದ್ಘಾಟನೆ ಮಾಡಿ ಕ್ಷೇತ್ರದ ಎಲ್ಲಾ ಕಾರ್ಯಕ್ರಮಗಳಲ್ಲಿ ಜ್ಞಾನ ವಿಕಾಸ ಉತ್ತಮ ಕಾರ್ಯಕ್ರಮವಾಗಿದ್ದು ಈ ಕಾರ್ಯಕ್ರಮಗಳ ಮೂಲಕ ಮಹಿಳೆಯರಿಗೆ ಉತ್ತಮ ಮಾಹಿತಿಗಳು ದೊರೆಯುತ್ತಿದ್ದು ಸದುಪಯೋಗ ಪಡೆಯಿರಿ ಎಂದರು.

ತಾಲೂಕಿನ ಯೋಜನಾಧಿಕಾರಿಯಾಗಿ ಸುರೇಂದ್ರ ರವರು ಜ್ಞಾನ ವಿಕಾಸ ಕಾರ್ಯಕ್ರಮದ ಉದ್ದೇಶಗಳ ಬಗ್ಗೆ ಮಾತನಾಡುತ್ತಾ ಜ್ಞಾನ ವಿಕಾಸ ಕೇಂದ್ರದಲ್ಲಿ ಸದಸ್ಯರಿಗೆ ವಿವಿಧ ಸಂಪನ್ಮೂಲ ವ್ಯಕ್ತಿಯಿಂದ ಮಾಹಿತಿ ನೀಡುವುದಲ್ಲದೆ ಸದಸ್ಯರ ಪ್ರತಿಭೆಗಳನ್ನು ಹೊರ ಹಾಕಲು ಅವಕಾಶವಿದೆ ಎಂದರು. ಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷ ಗುರುರಾಜ್ , ವಲಯ ಮೇಲ್ವಿಚಾರಕಿ ಉಷಾ, ಪ್ರಬುದ್ಧ ಕೇಂದ್ರದ ಸದಸ್ಯರಾದ ಕಲಾವತಿ ಉಪಸ್ಥಿತರಿದ್ದರು.

ಸಮನ್ವಯಧಿಕಾರಿ ಮಧುರಾವಸಂತ್ ನಿರೂಪಿಸಿ, ಸೇವಾಪ್ರತಿನಿಧಿ ಪುಷ್ಪರವರು ಸ್ವಾಗತಿಸಿ, ಶಶಿಕಲಾರವರು ಧನ್ಯವಾದವಿತ್ತರು.

Related posts

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ 18ನೇ ವರ್ಷದ ವಾರ್ಷಿಕೋತ್ಸವ-ವಿಶ್ವಕರ್ಮ ಪೂಜೆ

Suddi Udaya

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್- ಕಾರ್ಯಕ್ರಮ

Suddi Udaya

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya
error: Content is protected !!