23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

ಕೊಕ್ಕಡ : ಕೊಕ್ಕಡ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು. ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಅ.14ರಂದು ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ನಡೆಯಿತು.

ಸೈಬರ್ ಅಪರಾಧಗಳು ಹೆಚ್ಚು ನಡೆದಿದ್ದು ಇವರ ಪೈಕಿ ಒಬ್ಬ ಗ್ರಾಹಕರಿಗೆ ಮಾತ್ರ ಹಣ ಹಿಂತಿರುಗಿ ಬಂದಿದ್ದು ಈ ಬಗ್ಗೆ ವರದಿ ಕೇಳಿದರು ಬ್ಯಾಂಕಿನ ಸಿಬ್ಬಂದಿಗಳು ಯಾವುದೇ ರೀತಿಯ ಮಾಹಿತಿ ನೀಡಲು ನಿರಾಕರಿಸುತ್ತಿರುವುದರಿಂದ ಗ್ರಾಹಕರಿಗೆ ಸಂಶಯ ಕಾಡುತ್ತಿದೆ ಅಲ್ಲದೆ ಅತಿ ದೊಡ್ಡಮಟ್ಟದಲ್ಲಿ ಗ್ರಾಹಕರ ಖಾತೆಯಿಂದ ಸೈಬರ್ ಅಪರಾಧದ ಮೂಲಕ ಹಣ ವರ್ಗಾವಣೆ ಆಗುತ್ತಿರುವುದರಿಂದ ಬ್ಯಾಂಕಿನ ಗ್ರಾಹಕರೆಲ್ಲರೂ ಅಂತಕಕ್ಕೆ ಒಳಗಾಗಿದ್ದಾರೆ.

ಇಲ್ಲಿನ ಹೆಚ್ಚಿನ ಸಿಬ್ಬಂದಿಗಳಿಗೆ ವ್ಯವಹರಿಸಲು ಭಾಷೆ ಸಮಸ್ಯೆ ಆಗುತ್ತಿರುವುದರಿಂದ ಗ್ರಾಹಕರಿಗೆ ಬ್ಯಾಂಕಿನೊಂದಿಗೆ ವ್ಯವಹಾರ ನಡೆಸಲು, ತಮಗಾದ ಸಮಸ್ಯೆಗಳನ್ನು ಹೇಳಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದು ಸಾರ್ವಜನಿಕರ ದೂರಾಗಿದೆ

ಕಳೆದ 19ವರ್ಷಗಳಿಂದ ಬ್ಯಾಂಕಿನ ಸರಾಫರಾಗಿ ಕೆಲಸ ನಿರ್ವಹಿಸುತ್ತಿದ್ದ ಪದ್ಮನಾಭ ಆಚಾರ್ಯ ಅವರನ್ನು ಸಕಾರಣವಿಲ್ಲದೆ ಆರೋಪಿಯನ್ನಾಗಿ ಬಿಂಬಿಸಿ ಕೆಲಸದಿಂದ ವಜಾ ಮಾಡಲಾಗಿದೆ, ಈ ಬಗ್ಗೆ ಸರಿಯಾದ ಕಾರಣ ನೀಡುವಂತೆ ಒತ್ತಾಯಿಸಲಾಯಿತು.ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಡೆಸುವುದಾಗಿ ಸಂಘಟಕರು ತಿಳಿಸಿದರು.

ಹೋರಾಟದಲ್ಲಿ ನ್ಯಾಯವಾದಿ ಬಿ.ಎಂ ಭಟ್, ಸಾಮಾಜಿಕ ಹೋರಾಟಗಾರರಾದ ಈಶ್ವರಿ, ಧನಂಜಯ, ಶೀನ ನಾಯ್ಕ್, ತುಕ್ರಪ್ಪ ಶೆಟ್ಟಿ, ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷ ಸುಬ್ರಮಣ್ಯ ಶಬರಾಯ, ಇಸ್ಮಾಯಿಲ್, ಸಮಾಜ ಸೇವಕ ಶಾಮರಾಜ್, ಡಿಸಿಸಿ ಬ್ಯಾಂಕ್ ನ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಡಾ.ಗಣೇಶ್ ಪ್ರಸಾದ್, ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿಯ ಮಾಜಿ ಸದಸ್ಯ ಪ್ರಶಾಂತ.ರೈ, ಜೇಸುದಾಸ್, ನಾರಾಯಣಗೌಡ, ಸತ್ಯದಾಸ್, ಶ್ರೀಧರ ಗೌಡ, ಆನಂದ.ರೈ, ಶಾಂತಪ್ಪ ಮಡಿವಾಳ, ಬ್ಯಾಂಕಿನ ಸರಾಫ ಪದ್ಮನಾಭ ಆಚಾರ್ಯ ದಂಪತಿಗಳು ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಪುತ್ತೂರು ಶಾಸಕ ಅಶೋಕ್ ರೈ ಗೆ ಆಮಂತ್ರಣ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya
error: Content is protected !!