23.6 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದಸರಾ ಸಂಭ್ರಮಾಚರಣೆ

ನೆರಿಯ: ಸಿಯೋನ್ ಅಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಅ.12.10.2024ರಂದು ದಸರಾ ಹಬ್ಬವನ್ನು ಸಂಭ್ರಮದಿಂದ ಆಶ್ರಮನಿವಾಸಿಗಳೊಂದಿಗೆ ಆಚರಿಸಲಾಯಿತು. ಸಭಾಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನಲಂಕರಿಸಿದ್ದ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಡಾ.ಯು.ಸಿ.ಪೌಲೋಸ್ ರವರು ಎಲ್ಲರಿಗೂ ಶುಭಹಾರೈಸುತ್ತಾ ಮಾತನಾಡಿ, ದಸರಾ ಹಬ್ಬವನ್ನು ಯಾವುದೇ ಜಾತಿ-ಮತ, ಭೇದ-ಭಾವವಿಲ್ಲದೆ ಎಲ್ಲರೂ ಒಟ್ಟಾಗಿ ಆಚರಿಸಿ, ಸಂತೋಷವನ್ನು ಹಂಚಿಕೊಳ್ಳುವ ನಾಡಹಬ್ಬವಾಗಿದೆ ಹಾಗೂ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಪ್ರಾಮುಖ್ಯತೆಯನ್ನು ಹೊಂದಿರುವ ಬಹುಮುಖಿ ಹಬ್ಬವಾಗಿದೆ ಎಂದರು.

ಅತಿಥಿಗಳಾಗಿ ಸಂಸ್ಥೆಯ ವೈದ್ಯರಾದ ಡಾ. ಶಿವಾನಂದ ಸ್ವಾಮಿಯವರು, ನವರಾತ್ರಿಯಲ್ಲಿ ನವದುರ್ಗೆಯರನ್ನು ಆರಾಧಿಸುವ ರೀತಿ ಮತ್ತು ಮಹತ್ವದ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು. ಸಂಸ್ಥೆಯ ಟ್ರಸ್ಟೀ ಸದಸ್ಯೆ ಶ್ರೀಮತಿ ಮೇರಿ ಯು.ಪಿ.ಯವರು, ಆಶ್ರಮನಿವಾಸಿಗಳಾದ ರವಿ ಮತ್ತು ಸರಸ್ವತಿಪ್ರಿಯರವರು ಉಪಸ್ಥಿತರಿದ್ದರು..


ಸಭಾಕಾರ್ಯಕ್ರಮದ ನಂತರ ಆಶ್ರಮನಿವಾಸಿಗಳಿಂದ ಮತ್ತು ಸಿಬ್ಬಂದಿವರ್ಗದವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ದಸರಾ ಹಬ್ಬದ ಪ್ರಯುಕ್ತ ಆಶ್ರಮನಿವಾಸಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು, ಆಶ್ರಮನಿವಾಸಿಗಳು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿಯವರಾದ ಶ್ರೀಮತಿ ದಿನವತಿಯವರು ಕಾರ್ಯಕ್ರಮ ನಿರೂಪಿಸಿದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಮೆಸ್ಕಾಂ ವಿಜಿಲೆನ್ಸ್ ಎ ಡಬ್ಲ್ಯೂ ಇ ಪ್ರವೀಣ್ ಹಾಗೂ ಮೆಸ್ಕಾಂ ವಿಜಿಲೆನ್ಸ್ ಪೊಲೀಸ್ ಭೇಟಿ

Suddi Udaya
error: Content is protected !!