July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

ಬೆಳ್ತಂಗಡಿ: ಇತ್ತೀಚೆಗಷ್ಟೇ ನಮ್ಮನೆಲ್ಲ ಅಗಲಿರುವ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಪೂರ್ವ ಅಧ್ಯಕ್ಷರಾದ ಪೃಥ್ವಿ ರಂಜನ್ ರಾವ್ ರವರಿಗೆ ಗೌರವ ಪೂರ್ವಕ ನುಡಿ ನಮನವನ್ನು ಜೆಸಿ ಭವನದಲ್ಲಿ ಸಲ್ಲಿಸಲಾಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಹಾಗೂ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಮಾಡುವ ಮೂಲಕ ಘಟಕದ ಪರವಾಗಿ ಗೌರವವನ್ನು ಸಲ್ಲಿಸಲಾಯಿತು.

1983ರಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ನಂತರ ಎಲ್ಲಾ ಅಧ್ಯಕ್ಷರುಗಳಿಗೆ ಮಾರ್ಗದರ್ಶನವನ್ನು ಮಾಡುತ್ತಾ ಜೆಸಿ ಸಂಸ್ಥೆಯೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ನಂತರ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಾಮಾಜಿಕವಾಗಿ ಸೇವೆಯನ್ನು ಸಲ್ಲಿಸುತ್ತಾ ಬಂದಿರುತಾರೆ.

ಇವರ ಪತ್ನಿ ಉಮಾ ರಾವ್ ರವರು ಕೂಡ ಜೆಸಿರೇಟ್ ವಿಭಾಗದ ಪೂರ್ವ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ ಹಾಗೂ ಪುತ್ರ ರತೀಶ್ ಹಾಗೂ ಸೊಸೆ ಪ್ರೀತಿ ರತೀಶ್ ಕೂಡ ಜೆಸಿಐ ಬೆಳ್ತಂಗಡಿಯ ಮಂಜುಶ್ರೀಯ ಸಕ್ರಿಯ ಸದಸ್ಯರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ನುಡಿ ನಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ರವರು ವಹಿಸಿದ್ದರು.

ಘಟಕದ ಪೂರ್ವ ಅಧ್ಯಕ್ಷರಾದ ಚಿದಾನಂದ ಇಡ್ಯಾ ರವರು ಪೃಥ್ವಿರಂಜನ್ ರಾವ್ ರವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಬಗ್ಗೆ ಹಾಗೂ ಅವರ ಕೊಡುಗೆಗಳನ್ನು ಸ್ಮರಿಸುತ್ತಾ ನುಡಿ ನಮನವನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಜೆಸಿಐ ಮುಂಡ್ಕುರು ಭಾರ್ಗವ ಘಟಕದ ಪೂರ್ವ ಅಧ್ಯಕ್ಷರು ಹಾಗೂ ವಲಯ ಹದಿನೈದರ ಲೇಡಿ ಜೆಸಿ ವಿಭಾಗದ ಸಂಯೋಜಕರಾದ ಮಾಲತಿ ಉಮೇಶ್ ಹಾಗೂ ಜೆಸಿಐ ಮುಂಡ್ಕುರ್ ಭಾರ್ಗವ ಘಟಕದ ಅಧ್ಯಕ್ಷರಾದ ಗಣೇಶ್ ಆಚಾರ್ಯ, ಜೆಸಿಐ ಮಂಗಳೂರು ಸಾಮ್ರಾಟ್ ಘಟಕದ ಸದಸ್ಯರು, ಯುವ ಉದ್ಯಮಿಗಳಾದ ವರುಣ್ ಪ್ರಭು ಪ್ರಭು, ಬೆಳ್ತಂಗಡಿ ಘಟಕದ ಪೂರ್ವ ಅಧ್ಯಕ್ಷರುಗಳಾದ ಪ್ರಶಾಂತ್ ಲಾಯಿಲ, ನಾರಾಯಣ ಶೆಟ್ಟಿ, ಲೇಡಿ ಜೆಸಿ ಸಂಯೋಜಕರಾದ ಶ್ರುತಿರಂಜಿತ್, ಉಪಾಧ್ಯಕ್ಷರುಗಳಾದ ಆಶಾ ಪ್ರಶಾಂತ್, ಚಂದ್ರಹಾಸ್, ಶೈಲೇಶ್, ಜೆಜೆಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್, ಅಕ್ಷಯ್ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

ಕಾರ್ಯದರ್ಶಿ ಅನುದೀಪ್ ಜೈನ್ ರವರ ಧನ್ಯವಾದವಿತ್ತರು.

Related posts

ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆಯವರಿಂದ ರೈತರತ್ನ ಪ್ರಶಸ್ತಿ ಪುರಸ್ಕೃತ ಕುತ್ಲೂರು ಶಾಲೆಗೆ ಕಳೆಕೊಚ್ಚುವ ಯಂತ್ರ ಕೊಡುಗೆ

Suddi Udaya

ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ISO 27001 ಪ್ರಶಸ್ತಿ ಪ್ರದಾನ

Suddi Udaya

ಕಾಶಿಪಟ್ಟಣ: ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಶಿಶಿಲದಲ್ಲಿ ನರೇಂದ್ರ ಮೋದಿಯವರ ಪರಿಕಲ್ಪನೆಯಂತೆ ಒಂಬತ್ತು ಜನ ಮಹಿಳೆಯರಿಂದ ಪ್ರಥಮ ಮತದಾನ

Suddi Udaya

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!