April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

ಧರ್ಮಸ್ಥಳ : ರಾಷ್ಟ್ತ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಮಕುಂಜದ ಟಿ. ನಾರಾಯಣ ಭಟ್ ರಚಿಸಿದ “ನೆನಪುಗಳ ನೇವರಿಕೆ” ಪುಸ್ತಕವನ್ನು ಅ.12 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ತಮ್ಮ ಬದುಕಿನ ಜೊತೆಗೆ ಸುತ್ತಮುತ್ತಲ ಬದುಕಿಗೂ ಒಂದಲ್ಲ ಒಂದು ರೀತಿಯಲ್ಲಿ ಆಸರೆಯಾಗಿ ನಡೆದುಕೊಂಡವರನ್ನು ಗುರುತಿಸಿ, ನೆನವರಿಕೆ ಮಾಡಿರುವ ಕೃತಿ “ನೆನಪುಗಳ ನೇವರಿಕೆ”ಯಲ್ಲಿ ಪ್ರಸ್ತುತ ಜನಾಂಗಕ್ಕೆ ಹಾಗೂ ಮುಂದಿನ ತಲೆಮಾರಿಗೂ ಉಪಯುಕ್ತ ಮಾಹಿತಿ, ಮಾರ್ಗದರ್ಶನವಿದೆ. ಇದು ಕೇವಲ ವ್ಯಕ್ತಿ ಚಿತ್ರಣವಲ್ಲ. ಪ್ರಸ್ತುತ ವಿದ್ಯಮಾನಗಳನ್ನು ಸಾದರಪಡಿಸುವ ಮಾಹಿತಿಯ ಕಣಜವಾಗಿದ್ದು ಕುತೂಹಲದಿಂದ ಓದಿಸಿಕೊಂಡು ಹೋಗುತ್ತದೆ ಎಂದು ಹೆಗ್ಗಡೆಯವರು ಶ್ಲಾಘಿಸಿ ಲೇಖಕರನ್ನು ಅಭಿನಂದಿಸಿದರು.

ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀನಾಥ್ ಎಂ.ಪಿ., ನಿವೃತ್ತ ಮುಖ್ಯ ಶಿಕ್ಷಕ ಟಿ. ರವೀಂದ್ರ ಭಟ್, ನಿವೃತ್ತ ಮುಖ್ಯ ಶಿಕ್ಷಕಿ ಸರೋಜಾ ಕುಮಾರಿ, ಎಂ. ಸಂಧ್ಯಾ, ಮತ್ತು ಡಾ. ಮೌಲಿಕಾ ಎಂ.ಎಸ್. ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸಮಾಜ ಸೇವಕ ಚಾರ್ಮಾಡಿ ಹಸನಬ್ಬರವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸೇವೆಯ ಅಂಬುಲೆನ್ಸ್ ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆ

Suddi Udaya

ಸವಣಾಲು: ಗುತ್ತಿನಬೈಲು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ನೂತನ ನಿದೇ೯ಶಕರುಗಳಿಗೆ ಅಭಿನಂದನೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya
error: Content is protected !!