September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

ಧರ್ಮಸ್ಥಳ : ರಾಷ್ಟ್ತ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಮಕುಂಜದ ಟಿ. ನಾರಾಯಣ ಭಟ್ ರಚಿಸಿದ “ನೆನಪುಗಳ ನೇವರಿಕೆ” ಪುಸ್ತಕವನ್ನು ಅ.12 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ತಮ್ಮ ಬದುಕಿನ ಜೊತೆಗೆ ಸುತ್ತಮುತ್ತಲ ಬದುಕಿಗೂ ಒಂದಲ್ಲ ಒಂದು ರೀತಿಯಲ್ಲಿ ಆಸರೆಯಾಗಿ ನಡೆದುಕೊಂಡವರನ್ನು ಗುರುತಿಸಿ, ನೆನವರಿಕೆ ಮಾಡಿರುವ ಕೃತಿ “ನೆನಪುಗಳ ನೇವರಿಕೆ”ಯಲ್ಲಿ ಪ್ರಸ್ತುತ ಜನಾಂಗಕ್ಕೆ ಹಾಗೂ ಮುಂದಿನ ತಲೆಮಾರಿಗೂ ಉಪಯುಕ್ತ ಮಾಹಿತಿ, ಮಾರ್ಗದರ್ಶನವಿದೆ. ಇದು ಕೇವಲ ವ್ಯಕ್ತಿ ಚಿತ್ರಣವಲ್ಲ. ಪ್ರಸ್ತುತ ವಿದ್ಯಮಾನಗಳನ್ನು ಸಾದರಪಡಿಸುವ ಮಾಹಿತಿಯ ಕಣಜವಾಗಿದ್ದು ಕುತೂಹಲದಿಂದ ಓದಿಸಿಕೊಂಡು ಹೋಗುತ್ತದೆ ಎಂದು ಹೆಗ್ಗಡೆಯವರು ಶ್ಲಾಘಿಸಿ ಲೇಖಕರನ್ನು ಅಭಿನಂದಿಸಿದರು.

ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀನಾಥ್ ಎಂ.ಪಿ., ನಿವೃತ್ತ ಮುಖ್ಯ ಶಿಕ್ಷಕ ಟಿ. ರವೀಂದ್ರ ಭಟ್, ನಿವೃತ್ತ ಮುಖ್ಯ ಶಿಕ್ಷಕಿ ಸರೋಜಾ ಕುಮಾರಿ, ಎಂ. ಸಂಧ್ಯಾ, ಮತ್ತು ಡಾ. ಮೌಲಿಕಾ ಎಂ.ಎಸ್. ಉಪಸ್ಥಿತರಿದ್ದರು.

Related posts

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ವೇಣೂರು ಯುವ ಸೇವಾ ಸಂಗಮ ಟ್ರಸ್ಟ್ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ.1 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

Suddi Udaya

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮಧ್ಯಾಂತರ ಸಮ್ಮೇಳನದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ

Suddi Udaya
error: Content is protected !!