23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

ಧರ್ಮಸ್ಥಳ : ರಾಷ್ಟ್ತ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಮಕುಂಜದ ಟಿ. ನಾರಾಯಣ ಭಟ್ ರಚಿಸಿದ “ನೆನಪುಗಳ ನೇವರಿಕೆ” ಪುಸ್ತಕವನ್ನು ಅ.12 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ತಮ್ಮ ಬದುಕಿನ ಜೊತೆಗೆ ಸುತ್ತಮುತ್ತಲ ಬದುಕಿಗೂ ಒಂದಲ್ಲ ಒಂದು ರೀತಿಯಲ್ಲಿ ಆಸರೆಯಾಗಿ ನಡೆದುಕೊಂಡವರನ್ನು ಗುರುತಿಸಿ, ನೆನವರಿಕೆ ಮಾಡಿರುವ ಕೃತಿ “ನೆನಪುಗಳ ನೇವರಿಕೆ”ಯಲ್ಲಿ ಪ್ರಸ್ತುತ ಜನಾಂಗಕ್ಕೆ ಹಾಗೂ ಮುಂದಿನ ತಲೆಮಾರಿಗೂ ಉಪಯುಕ್ತ ಮಾಹಿತಿ, ಮಾರ್ಗದರ್ಶನವಿದೆ. ಇದು ಕೇವಲ ವ್ಯಕ್ತಿ ಚಿತ್ರಣವಲ್ಲ. ಪ್ರಸ್ತುತ ವಿದ್ಯಮಾನಗಳನ್ನು ಸಾದರಪಡಿಸುವ ಮಾಹಿತಿಯ ಕಣಜವಾಗಿದ್ದು ಕುತೂಹಲದಿಂದ ಓದಿಸಿಕೊಂಡು ಹೋಗುತ್ತದೆ ಎಂದು ಹೆಗ್ಗಡೆಯವರು ಶ್ಲಾಘಿಸಿ ಲೇಖಕರನ್ನು ಅಭಿನಂದಿಸಿದರು.

ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀನಾಥ್ ಎಂ.ಪಿ., ನಿವೃತ್ತ ಮುಖ್ಯ ಶಿಕ್ಷಕ ಟಿ. ರವೀಂದ್ರ ಭಟ್, ನಿವೃತ್ತ ಮುಖ್ಯ ಶಿಕ್ಷಕಿ ಸರೋಜಾ ಕುಮಾರಿ, ಎಂ. ಸಂಧ್ಯಾ, ಮತ್ತು ಡಾ. ಮೌಲಿಕಾ ಎಂ.ಎಸ್. ಉಪಸ್ಥಿತರಿದ್ದರು.

Related posts

ಕೊಯ್ಯೂರಿನಲ್ಲಿ ಜಾಗದ ತಕರಾರು; ಕಾರ್ಮಿಕನ ಮೇಲೆ ಹಲ್ಲೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಾಶಿಬೆಟ್ಟು ಸ್ವಾಮಿ ಪ್ರಸಾದ್ ಅಸೋಸಿಯೇಟ್ಸ್ ನಲ್ಲಿ ಆಯುಧ ಪೂಜೆ

Suddi Udaya

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

Suddi Udaya
error: Content is protected !!