22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

ಧರ್ಮಸ್ಥಳ : ರಾಷ್ಟ್ತ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಮಕುಂಜದ ಟಿ. ನಾರಾಯಣ ಭಟ್ ರಚಿಸಿದ “ನೆನಪುಗಳ ನೇವರಿಕೆ” ಪುಸ್ತಕವನ್ನು ಅ.12 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ತಮ್ಮ ಬದುಕಿನ ಜೊತೆಗೆ ಸುತ್ತಮುತ್ತಲ ಬದುಕಿಗೂ ಒಂದಲ್ಲ ಒಂದು ರೀತಿಯಲ್ಲಿ ಆಸರೆಯಾಗಿ ನಡೆದುಕೊಂಡವರನ್ನು ಗುರುತಿಸಿ, ನೆನವರಿಕೆ ಮಾಡಿರುವ ಕೃತಿ “ನೆನಪುಗಳ ನೇವರಿಕೆ”ಯಲ್ಲಿ ಪ್ರಸ್ತುತ ಜನಾಂಗಕ್ಕೆ ಹಾಗೂ ಮುಂದಿನ ತಲೆಮಾರಿಗೂ ಉಪಯುಕ್ತ ಮಾಹಿತಿ, ಮಾರ್ಗದರ್ಶನವಿದೆ. ಇದು ಕೇವಲ ವ್ಯಕ್ತಿ ಚಿತ್ರಣವಲ್ಲ. ಪ್ರಸ್ತುತ ವಿದ್ಯಮಾನಗಳನ್ನು ಸಾದರಪಡಿಸುವ ಮಾಹಿತಿಯ ಕಣಜವಾಗಿದ್ದು ಕುತೂಹಲದಿಂದ ಓದಿಸಿಕೊಂಡು ಹೋಗುತ್ತದೆ ಎಂದು ಹೆಗ್ಗಡೆಯವರು ಶ್ಲಾಘಿಸಿ ಲೇಖಕರನ್ನು ಅಭಿನಂದಿಸಿದರು.

ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀನಾಥ್ ಎಂ.ಪಿ., ನಿವೃತ್ತ ಮುಖ್ಯ ಶಿಕ್ಷಕ ಟಿ. ರವೀಂದ್ರ ಭಟ್, ನಿವೃತ್ತ ಮುಖ್ಯ ಶಿಕ್ಷಕಿ ಸರೋಜಾ ಕುಮಾರಿ, ಎಂ. ಸಂಧ್ಯಾ, ಮತ್ತು ಡಾ. ಮೌಲಿಕಾ ಎಂ.ಎಸ್. ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

Suddi Udaya

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya

ಸೆ.15: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

Suddi Udaya
error: Content is protected !!