25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

ಬೆಳ್ತಂಗಡಿ: ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ನವೆಂಬರ್ 10 ರಂದು ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನ ರೆಖ್ಯದಲ್ಲಿ ನಡೆಯಲಿರುವ ಹಿಂದೂ ರಾಷ್ಟ ಜಾಗೃತಿ ಸಭೆಯ ಕುರಿತು ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಆನಂದ ಗೌಡ ರವರು ಮಾತಾನಾಡುತ್ತ ಇಂದು ಜಗತ್ತಿನಲ್ಲಿ 157 ಕ್ರೈಸ್ತ, 52 ಮುಸ್ಲಿಂ, 13 ಬೌದ್ಧ ಮತ್ತು 1 ಯಹೂದಿ ರಾಷ್ಟ್ರಗಳಿವೆ. ಆದರೆ ಹಿಂದೂಗಳಿಗೆ ಒಂದೇ ಒಂದು ರಾಷ್ಟ್ರವಿಲ್ಲ. ಜಾತ್ಯತೀತ ಭಾರತದ 9 ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ. ಜಾತ್ಯತೀತ ಸರಕಾರವು ದೇವಾಲಯಗಳನ್ನು ಸ್ವಾಧೀನ ಪಡಿಸಿಕೊಳ್ಳುತ್ತವೆ ಮತ್ತು ಹಿಂದೂಗಳ ತೀರ್ಥಯಾತ್ರೆಗಳ ಮೇಲೆ ತೆರಿಗೆಯನ್ನು ಹೇರುತ್ತದೆ. ಮತಾಂತರ, ಲವ್ ಜಿಹಾದ್, ಉಗುಳು ಜಿಹಾದ್ ಮುಂತಾದ ಷಡ್ಯಂತ್ರಗಳು ಬಯಲಾಗುತ್ತಿವೆ. ಆದುದರಿಂದ ಇದಕ್ಕೆಲ್ಲ ಒಂದೇ ಪರಿಹಾರ ಭಾರತವನ್ನು ಸವಿಂಧಾನಬದ್ಧವಾಗಿ ಹಿಂದೂರಾಷ್ಟ್ರವೆಂದು ಘೋಷಣೆ ಮಾಡಬೇಕೆಂದು ಅ.13 ರಂದು ಶ್ರೀ ಗುಡ್ರಾಮಲ್ಲೇಶ್ವರ ಸಭಾಗ್ರಹದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.


ಈ ಪೂರ್ವಭಾವಿ ಸಭೆಯಲ್ಲಿ ಜಯರಾಮ ನೆಲ್ಲಿತ್ತಾಯ ಧಾರ್ಮಿಕ ಮುಂದಾಲು ಹಾಗೂ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅಭಿವೃದ್ಧಿಯ ನಿಕಟಪೂರ್ವ ಅಧ್ಯಕ್ಷ ದಾಮೋದರ ಗೌಡ ಕೊಲೆಚ್ಚಾವು ನಾಲೆಕ್ಕಿ ಗುತ್ತಿನ ಮನೆ, ಹಾಗೂ ಶಿಶಿಲ, ಶಿಬಾಜೆ, ಹತ್ಯಡ್ಕ, ರೆಖ್ಯಾ ಗ್ರಾಮದ ಹಿಂದುತ್ವನಿಷ್ಟರು, ಹಾಗೂ ಧರ್ಮ ಪ್ರೇಮಿಗಳು ಉಪಸ್ಥಿತರಿದ್ದರು.

ನವೆಂಬರ್ 10 ರಂದು ನಡೆಯಲಿರುವ ಹಿಂದೂ ರಾಷ್ಟ್ರ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಧರ್ಮ ಪ್ರೇಮಿಗಳು, ಬಂಧು ಭಗೀನಿಯರು ಭಾಗಿಯಾಗಬೇಕು ಮತ್ತು ಹೆಚ್ಚು ಸಂಖ್ಯೆ ಸೇರಿಸುವಲ್ಲಿ ನಾವೆಲ್ಲರೂ ಕೈ ಜೋಡಿಸಿ ಸಭೆಯನ್ನು ಯಶಸ್ವೀಗೊಳಿಸಿ ರಾಷ್ಟ್ರ ಹಾಗೂ ಧರ್ಮದ ಆ ಭಗವಂತನ ಕಾರ್ಯದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವ ಎಂದು ಕರೆ ನೀಡಿದರು.


ಸಮಿತಿಯ ಬಾಲಕೃಷ್ಣ ಗೌಡ, ಯಂ.ಹರೀಶ್, ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಹಿಂದೂ ಜನಜಾಗೃತಿ ಸಮಿತಿ ಸೇವಕ ದಾಮೋದರ ಗೌಡ ಇವರು ಧನ್ಯವಾದವಿತ್ತರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಯಾತ್ರಿ ನಿವಾಸ: ನ. 23 ರಂದು ಯಾತ್ರಿ ನಿವಾಸದ ಶಿಲಾನ್ಯಾಸ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕುಕ್ಕೇಡಿ ಗ್ರಾಮ‌ ಪಂಚಾಯತ್ ಗೆ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ

Suddi Udaya

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya
error: Content is protected !!