23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

ಅಳದಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಸೇವೆಗಾಗಿ ಕ್ರೀಡೆ ಎಂಬ ಪರಿಕಲ್ಪನೆಯಡಿ ಕಳೆದ ಏಳು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸುತ್ತಿರುವ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ಮಾಸಿಕ ಸಭೆಯು ಅ.13 ಸ.ಉ.ಪ್ರಾ ಶಾಲೆ ಬಡಗಕಾರಂದೂರು ಇಲ್ಲಿನ ವಠಾರದಲ್ಲಿ ಜರುಗಿತು.

ಸಂಘಟನೆಯ ಸದಸ್ಯತ್ವ ವಿಸ್ತರಣೆ,ಮುಂಬರುವ ಆವೃತ್ತಿಯ ತಯಾರಿ,ರೂಪುರೇಷೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು ಹಾಗೂ ಸಂಘಟನೆಯ ‘ಸ್ವಾವಲಂಬಿ’ ಮಹಿಳಾ ಸಶಕ್ತೀಕರಣ ಯೋಜನೆಯಡಿ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲಾಯಿತು.

ಸಂಘಟನೆಯ ಪ್ರಧಾನ ಸಂಚಾಲಕ ಸಂದೀಪ್ ಎಸ್ ನೀರಲ್ಕೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ಅರ್ಚಕರಾದ ಪ್ರವೀಣ್ ಮಯ್ಯ ಹಾಗೂ ಸಂಘಟನೆಯ ಸಲಹೆಗಾರರಾದ ಇಸಾಕ್ ರವರು ಹೊಲಿಗೆ ಯಂತ್ರ ವಿತರಿಸಿ ಶುಭ ಹಾರೈಸಿದರು. ಸಭೆಯಲ್ಲಿ ಸಲಹೆಗಾರರಾದ ಉಮೇಶ್ ಸುವರ್ಣ,ಜಯ ಪೂಜಾರಿ,ಅತುಲ್ ಕಾರಂತ್, ಶ್ರೀನಾಥ್ ಶೆಟ್ಟಿ,ಅವಿನಾಶ್,ಪ್ರಧಾನ ಕಾರ್ಯದರ್ಶಿ ರಕ್ಷಿತ್ ಎಬಿ,ಕೋಶಾಧಿಕಾರಿ ವಿಶ್ವನಾಥ್ ಕಾಶಿಪಟ್ನ,ಕ್ರೀಡಾ ಸಂಯೋಜಕ ಜಯಾನಂದ ಎ,ಸದಸ್ಯರಾದ ಅಭಿಷೇಕ್ ನೀರಲ್ಕೆ,ಇರ್ಷಾದ್,ಸಚಿನ್,ಯಕ್ಷಿತ್,ಪ್ರಶಾಂತ್ ಭಂಡಾರಿ,ಮಹಮ್ಮದ್ ಶರೀಫ್,ಶರತ್ ಬಿಕ್ಕಿರ,ಉಮೇಶ್ ದೇವಾಡಿಗ ಉಪಸ್ಥಿತರಿದ್ದರು.

Related posts

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಎಸ್ ಡಿ ಎಂ ಬಿ.ವೊಕ್ ಉತ್ಸವ : ವಾಣಿ ಪ. ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya
error: Content is protected !!