September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

ಅಳದಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಸೇವೆಗಾಗಿ ಕ್ರೀಡೆ ಎಂಬ ಪರಿಕಲ್ಪನೆಯಡಿ ಕಳೆದ ಏಳು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸುತ್ತಿರುವ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ಮಾಸಿಕ ಸಭೆಯು ಅ.13 ಸ.ಉ.ಪ್ರಾ ಶಾಲೆ ಬಡಗಕಾರಂದೂರು ಇಲ್ಲಿನ ವಠಾರದಲ್ಲಿ ಜರುಗಿತು.

ಸಂಘಟನೆಯ ಸದಸ್ಯತ್ವ ವಿಸ್ತರಣೆ,ಮುಂಬರುವ ಆವೃತ್ತಿಯ ತಯಾರಿ,ರೂಪುರೇಷೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು ಹಾಗೂ ಸಂಘಟನೆಯ ‘ಸ್ವಾವಲಂಬಿ’ ಮಹಿಳಾ ಸಶಕ್ತೀಕರಣ ಯೋಜನೆಯಡಿ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲಾಯಿತು.

ಸಂಘಟನೆಯ ಪ್ರಧಾನ ಸಂಚಾಲಕ ಸಂದೀಪ್ ಎಸ್ ನೀರಲ್ಕೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ಅರ್ಚಕರಾದ ಪ್ರವೀಣ್ ಮಯ್ಯ ಹಾಗೂ ಸಂಘಟನೆಯ ಸಲಹೆಗಾರರಾದ ಇಸಾಕ್ ರವರು ಹೊಲಿಗೆ ಯಂತ್ರ ವಿತರಿಸಿ ಶುಭ ಹಾರೈಸಿದರು. ಸಭೆಯಲ್ಲಿ ಸಲಹೆಗಾರರಾದ ಉಮೇಶ್ ಸುವರ್ಣ,ಜಯ ಪೂಜಾರಿ,ಅತುಲ್ ಕಾರಂತ್, ಶ್ರೀನಾಥ್ ಶೆಟ್ಟಿ,ಅವಿನಾಶ್,ಪ್ರಧಾನ ಕಾರ್ಯದರ್ಶಿ ರಕ್ಷಿತ್ ಎಬಿ,ಕೋಶಾಧಿಕಾರಿ ವಿಶ್ವನಾಥ್ ಕಾಶಿಪಟ್ನ,ಕ್ರೀಡಾ ಸಂಯೋಜಕ ಜಯಾನಂದ ಎ,ಸದಸ್ಯರಾದ ಅಭಿಷೇಕ್ ನೀರಲ್ಕೆ,ಇರ್ಷಾದ್,ಸಚಿನ್,ಯಕ್ಷಿತ್,ಪ್ರಶಾಂತ್ ಭಂಡಾರಿ,ಮಹಮ್ಮದ್ ಶರೀಫ್,ಶರತ್ ಬಿಕ್ಕಿರ,ಉಮೇಶ್ ದೇವಾಡಿಗ ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಮರೋಡಿ: ಕೃಷಿಕ ಚೀಂಕ್ರ ಪೂಜಾರಿ ನಿಧನ

Suddi Udaya

ಆ.2 : ವೇಣೂರು ವಿದ್ಯುತ್ ನಿಲುಗಡೆ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

Suddi Udaya

ಸರಕಾರಿ ನೌಕರರ ಕ್ರೀಡಾಕೂಟ: ಯೋಗಾಸನ ಸ್ಪರ್ಧೆಯಲ್ಲಿ ರೆಖ್ಯದ ಬಾಲಕೃಷ್ಣರವರಿಗೆ ಚಿನ್ನದ ಪದಕ

Suddi Udaya

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya
error: Content is protected !!