July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

ಅಳದಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಸೇವೆಗಾಗಿ ಕ್ರೀಡೆ ಎಂಬ ಪರಿಕಲ್ಪನೆಯಡಿ ಕಳೆದ ಏಳು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸುತ್ತಿರುವ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ಮಾಸಿಕ ಸಭೆಯು ಅ.13 ಸ.ಉ.ಪ್ರಾ ಶಾಲೆ ಬಡಗಕಾರಂದೂರು ಇಲ್ಲಿನ ವಠಾರದಲ್ಲಿ ಜರುಗಿತು.

ಸಂಘಟನೆಯ ಸದಸ್ಯತ್ವ ವಿಸ್ತರಣೆ,ಮುಂಬರುವ ಆವೃತ್ತಿಯ ತಯಾರಿ,ರೂಪುರೇಷೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು ಹಾಗೂ ಸಂಘಟನೆಯ ‘ಸ್ವಾವಲಂಬಿ’ ಮಹಿಳಾ ಸಶಕ್ತೀಕರಣ ಯೋಜನೆಯಡಿ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲಾಯಿತು.

ಸಂಘಟನೆಯ ಪ್ರಧಾನ ಸಂಚಾಲಕ ಸಂದೀಪ್ ಎಸ್ ನೀರಲ್ಕೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ಅರ್ಚಕರಾದ ಪ್ರವೀಣ್ ಮಯ್ಯ ಹಾಗೂ ಸಂಘಟನೆಯ ಸಲಹೆಗಾರರಾದ ಇಸಾಕ್ ರವರು ಹೊಲಿಗೆ ಯಂತ್ರ ವಿತರಿಸಿ ಶುಭ ಹಾರೈಸಿದರು. ಸಭೆಯಲ್ಲಿ ಸಲಹೆಗಾರರಾದ ಉಮೇಶ್ ಸುವರ್ಣ,ಜಯ ಪೂಜಾರಿ,ಅತುಲ್ ಕಾರಂತ್, ಶ್ರೀನಾಥ್ ಶೆಟ್ಟಿ,ಅವಿನಾಶ್,ಪ್ರಧಾನ ಕಾರ್ಯದರ್ಶಿ ರಕ್ಷಿತ್ ಎಬಿ,ಕೋಶಾಧಿಕಾರಿ ವಿಶ್ವನಾಥ್ ಕಾಶಿಪಟ್ನ,ಕ್ರೀಡಾ ಸಂಯೋಜಕ ಜಯಾನಂದ ಎ,ಸದಸ್ಯರಾದ ಅಭಿಷೇಕ್ ನೀರಲ್ಕೆ,ಇರ್ಷಾದ್,ಸಚಿನ್,ಯಕ್ಷಿತ್,ಪ್ರಶಾಂತ್ ಭಂಡಾರಿ,ಮಹಮ್ಮದ್ ಶರೀಫ್,ಶರತ್ ಬಿಕ್ಕಿರ,ಉಮೇಶ್ ದೇವಾಡಿಗ ಉಪಸ್ಥಿತರಿದ್ದರು.

Related posts

ಕಕ್ಕಿಂಜೆಯಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್‌ನಿಂದ ಟ್ರಾಫಿಕ್ ಕಿರಿಕಿರಿ

Suddi Udaya

ಜೂ 1: ಪುತ್ತೂರಿನಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸರ್ವಸದಸ್ಯರುಗಳ ಮಹಾಅಧಿವೇಶನ ಮತ್ತು ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ಮಾರ್ಟ್ ಟಿ. ವಿ. ಉದ್ಘಾಟನೆ ಮತ್ತು ಪೋಷಕರ ಮಹಾಸಭೆ

Suddi Udaya

ಅಕ್ರಮವಾಗಿ ದಾಸ್ತಾನು ಮಾಡಿದ್ದ ಡಿಸೇಲ್ ಪತ್ತೆ: ಬೆಳ್ತಂಗಡಿ ಡಿವೈಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

Suddi Udaya

ಬರೆಂಗಾಯ ನಿವಾಸಿ ನಾರಾಯಣ ಎಂ.ಕೆ ಅಸೌಖ್ಯದಿಂದ ನಿಧನ

Suddi Udaya
error: Content is protected !!