April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

ಅಳದಂಗಡಿ: ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ ಇವರ ಆಯೋಜಕತ್ವದಲ್ಲಿ ಪ್ರಪ್ರಥಮ ಬಾರಿಗೆ ಅಳದಂಗಡಿಯಲ್ಲಿ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಹಾಗೂ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವು ಅ. 17 ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ವಠಾರದಲ್ಲಿ ನಡೆಯಲಿದೆ.

ಆರೋಗ್ಯ ಮೇಳ ಉದ್ಘಾಟನೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಳದಂಗಡಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರದ ಅಧ್ಯಕ್ಷ ದೇವದಾಸ್ ಕೆ. ಸಾಲ್ಯಾನ್ ವಹಿಸಲಿದ್ದಾರೆ.

ಬೆಳಿಗ್ಗೆ 9.30 ಕ್ಕೆ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈಭವ, ಬೆಳಿಗ್ಗೆ 10 ಕ್ಕೆ ಅಳದಂಗಡಿ ಪೇಟೆಯಿಂದ ಕಾರ್ಗಿಲ್ ಯೋಧರ ಬೃಹತ್ ಮೆರವಣಿಗೆಗೆ ಡಾ. ಎನ್. ಯಂ ತುಳುಪುಳೆ ಅಳದಂಗಡಿ ರವರು ಚಾಲನೆ ನೀಡಲಿದ್ದಾರೆ.

ಬೆಳಿಗ್ಗೆ 11.00 ಕ್ಕೆ ಸಭಾಕಾರ್ಯಕ್ರಮದಲ್ಲಿ ದೇಶಕ್ಕಾಗಿ ಸೇವೆಗೈದ ಕಾರ್ಗಿಲ್ ವೀರ ಯೋಧರು ಮತ್ತು ನಿಸ್ವಾರ್ಥ ಸೇವೆಗೈಯುತ್ತಿರುವ ಸಾಮಾಜಿಕ ಕಾರ್ಯಕರ್ತರಾದ ಕ್ಯಾಪ್ಟನ್ ನವೀನ್ ನಾಗಪ್ಪ, ಶ್ರೀರಂಗಪ್ಪ ಹುಲಿಯಪ್ಪ ಆಲೂರು, ಹರೀಶ್ ರೈ.ಪಿ., ಡಾ. ರವಿ ಕಕ್ಕೆಪದವು ಜನಸ್ನೇಹಿ ಯೋಗೀಶ್ ರವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವು ನಡೆಯಲಿದೆ.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರದ ಗೌರವ ಅಧ್ಯಕ್ಷ ಶಿವಪ್ರಸಾದ್ ಅಜಿಲರು ವಹಿಸಲಿದ್ದಾರೆ. ಹಾಗೂ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

Related posts

ಬೆಳ್ತಂಗಡಿ: ಪಿ. ಎಂ. ಶ್ರೀ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಪಕ್ವಾಡದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya
error: Content is protected !!