July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು..

ಶಿಬಿರವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರು (MRW ) ಆದ ಜೋನ್ ಬ್ಯಾಪಿಸ್ಟ್ ರವರ ಮಾರ್ಗದರ್ಶನದಲ್ಲಿ ನಡೆಸಲಾಯಿತು ಹಾಗೂ ಈ ಶಿಬಿರವನ್ನು ಇನ್ನಷ್ಟು ಅರ್ಥಪೂರ್ಣವಾಗಿ ನಡೆಸಿಕೊಳ್ಳಲು ತಾಲೂಕಿನ ನಗರ ಪುನರ್ವಸತಿ ಕಾರ್ಯಕರ್ತರು ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರ ಸಹಕಾರದೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಲಾಯಿತು.

ಜಿಲ್ಲಾ ಆಸ್ಪತ್ರೆಯಾದ ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ವೈದ್ಯರ ಮೂಲಕ ಹಾಗೂ ಸಿಬ್ಬಂದಿ ವರ್ಗದವರ ಉಪಸ್ಥಿತಿಯಲ್ಲಿ ತಾಲೂಕಿನ ಅನೇಕ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಅವರಿಗೆ ಸಿಗಬೇಕಾದ ಸರ್ಕಾರ ಸೌಲಭ್ಯ ಯೋಜನೆಗಳನ್ನು ಪಡೆದುಕೊಳ್ಳಲು ಸಹಕಾರ ಆಗಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಮಾಡಿಕೊಡಲಾಯಿತು.

Related posts

ಧರ್ಮಸ್ಥಳ: ನಾರ್ಯ ನಿವಾಸಿ ನಾಟಿ ವೈದ್ಯ ಹೊನ್ನಪ್ಪ ಗೌಡ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya

ಜಡಿಮಳೆ: ಉರುಳಿ ಬಿದ್ದ ಸಂಗಮ ಕ್ಷೇತ್ರ ಕಲ್ಮಂಜ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಪುರಾತನ ಕಾಲದ ಅಶ್ವತ್ಥ ಮರ

Suddi Udaya

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಶ್ರೀ ಗೌರಿ ಪೂಜೆ-ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!