September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

ಅಳದಂಗಡಿ: ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ ಇವರ ಆಯೋಜಕತ್ವದಲ್ಲಿ ಪ್ರಪ್ರಥಮ ಬಾರಿಗೆ ಅಳದಂಗಡಿಯಲ್ಲಿ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಹಾಗೂ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವು ಅ. 17 ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ವಠಾರದಲ್ಲಿ ನಡೆಯಲಿದೆ.

ಆರೋಗ್ಯ ಮೇಳ ಉದ್ಘಾಟನೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಳದಂಗಡಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರದ ಅಧ್ಯಕ್ಷ ದೇವದಾಸ್ ಕೆ. ಸಾಲ್ಯಾನ್ ವಹಿಸಲಿದ್ದಾರೆ.

ಬೆಳಿಗ್ಗೆ 9.30 ಕ್ಕೆ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈಭವ, ಬೆಳಿಗ್ಗೆ 10 ಕ್ಕೆ ಅಳದಂಗಡಿ ಪೇಟೆಯಿಂದ ಕಾರ್ಗಿಲ್ ಯೋಧರ ಬೃಹತ್ ಮೆರವಣಿಗೆಗೆ ಡಾ. ಎನ್. ಯಂ ತುಳುಪುಳೆ ಅಳದಂಗಡಿ ರವರು ಚಾಲನೆ ನೀಡಲಿದ್ದಾರೆ.

ಬೆಳಿಗ್ಗೆ 11.00 ಕ್ಕೆ ಸಭಾಕಾರ್ಯಕ್ರಮದಲ್ಲಿ ದೇಶಕ್ಕಾಗಿ ಸೇವೆಗೈದ ಕಾರ್ಗಿಲ್ ವೀರ ಯೋಧರು ಮತ್ತು ನಿಸ್ವಾರ್ಥ ಸೇವೆಗೈಯುತ್ತಿರುವ ಸಾಮಾಜಿಕ ಕಾರ್ಯಕರ್ತರಾದ ಕ್ಯಾಪ್ಟನ್ ನವೀನ್ ನಾಗಪ್ಪ, ಶ್ರೀರಂಗಪ್ಪ ಹುಲಿಯಪ್ಪ ಆಲೂರು, ಹರೀಶ್ ರೈ.ಪಿ., ಡಾ. ರವಿ ಕಕ್ಕೆಪದವು ಜನಸ್ನೇಹಿ ಯೋಗೀಶ್ ರವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವು ನಡೆಯಲಿದೆ.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರದ ಗೌರವ ಅಧ್ಯಕ್ಷ ಶಿವಪ್ರಸಾದ್ ಅಜಿಲರು ವಹಿಸಲಿದ್ದಾರೆ. ಹಾಗೂ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

Related posts

ಪುದುವೆಟ್ಟು ಶ್ರೀ ಧ.ಮಂ. ಅ.ಹಿ. ಪ್ರಾ. ಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ವಿದ್ವತ್‌ ಪದವಿ ಪೂರ್ವ ಕಾಲೇಜು: ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ

Suddi Udaya

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya

ಜೂ.16: ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya
error: Content is protected !!