23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ಘಟಕದ ಸುವರ್ಣಮಹೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಕಾಲೇಜಿನ ಕ್ರೀಡಾಸಂಘ, ಉಜಿರೆಯ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಬೆಳ್ತಂಗಡಿ ರೋಟರಿಕ್ಲಬ್, ತಾಲ್ಲೂಕು ಪತ್ರಕರ್ತರ ಸಂಘ ಹಾಗೂ ಅನಂತೋಡಿ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಅ. 20 ರಂದು ದೇವಸ್ಥಾನದ ವಠಾರದಲ್ಲಿರುವ ನಾಲ್ಕೂವರೆ ಎಕ್ರೆ ಗದ್ದೆಯಲ್ಲಿ ಎಸ್.ಡಿ.ಎಂ. ಕಾಲೇಜಿನ ಎನ್.ಎಸ್.ಎಸ್. ಘಟಕದ ಸ್ವಯಂಸೇವಕರು ಹಾಗೂ ಎಸ್.ಡಿ.ಎಂ. ಕ್ರೀಡಾ ಸಂಘದ ಸದಸ್ಯರು “ಯುವಸಿರಿ, ರೈತ ಭಾರತದ ಐಸಿರಿ” ಕಾರ್ಯಕ್ರಮದಡಿಯಲ್ಲಿ ನೇಜಿನಾಟಿ ಮಾಡಲಿದ್ದಾರೆ ಎಂದು ಬದುಕು ಕಟ್ಟೋಣ ತಂಡದ ಸಂಚಾಲಕ ಕೆ. ಮೋಹನ್ ಕುಮಾರ್ ತಿಳಿಸಿದರು.


ಅವರು ಅ.15 ರಂದು ಉಜಿರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.


5೦೦ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ನೇಜಿ ನಾಟಿಯಲ್ಲಿ ಭಾಗವಹಿಸಲಿದ್ದು, ಮುಂದೆ ಬೆಳೆಯ ರಕ್ಷಣೆ, ಕಟಾವು ಮಾಡಿ ಭತ್ತದಿಂದ ಅಕ್ಕಿ ಪಡೆದು ಅಕ್ಕಿಯನ್ನು ಸ್ಥಳೀಯ ದೇವಸ್ಥಾನಗಳಿಗೆ ಅರ್ಪಿಸಲಾಗುವುದು. ಬೈಹುಲ್ಲನ್ನು “ನಂದಗೋಕುಲ” ಗೋಶಾಲೆಗೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.


ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ. ಮಹೇಶ್ ಕುಮಾರ್ ಶೆಟ್ಟಿ ಮಾತನಾಡಿ, ಯುವಜನತೆ ದೇಶದ ಅಮೂಲ್ಯ ಮಾನವಸಂಪನ್ಮೂಲವಾಗಿದ್ದು, ಕೃಷಿಯಲ್ಲಿ ಖುಷಿ ಕಾಣಬೇಕು ಹಾಗೂ  ಕೃಷಿ ಭೂಮಿಯ ಸಮರ್ಪಕ ಬಳಕೆಯಾಗಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಚೈತ್ರೇಶ್ ಇಳಂತಿಲ ಶುಭಾಶಂಸನೆ ಮಾಡಿದರು.
ಉಜಿರೆಯ ಸೋನಿಯಾವರ್ಮ ನೇಜಿನಾಟಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕೃಷಿ ಋಷಿ ಬಿ.ಕೆ. ದೇವರಾವ್ ಅವರನ್ನು ಗೌರವಿಸಲಾಗುವುದು.

ರಾಜೇಶ್ ಪೈ, ಸಂದೀಪ್ ಕುಮಾರ್ ಮತ್ತು ಶ್ರೀಧರ ಕೆ.ವಿ. ಉಪಸ್ಥಿತರಿದ್ದು ಪೂರಕ ಮಾಹಿತಿ ನೀಡಿದರು.

Related posts

ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!