September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ಘಟಕದ ಸುವರ್ಣಮಹೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಕಾಲೇಜಿನ ಕ್ರೀಡಾಸಂಘ, ಉಜಿರೆಯ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಬೆಳ್ತಂಗಡಿ ರೋಟರಿಕ್ಲಬ್, ತಾಲ್ಲೂಕು ಪತ್ರಕರ್ತರ ಸಂಘ ಹಾಗೂ ಅನಂತೋಡಿ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಅ. 20 ರಂದು ದೇವಸ್ಥಾನದ ವಠಾರದಲ್ಲಿರುವ ನಾಲ್ಕೂವರೆ ಎಕ್ರೆ ಗದ್ದೆಯಲ್ಲಿ ಎಸ್.ಡಿ.ಎಂ. ಕಾಲೇಜಿನ ಎನ್.ಎಸ್.ಎಸ್. ಘಟಕದ ಸ್ವಯಂಸೇವಕರು ಹಾಗೂ ಎಸ್.ಡಿ.ಎಂ. ಕ್ರೀಡಾ ಸಂಘದ ಸದಸ್ಯರು “ಯುವಸಿರಿ, ರೈತ ಭಾರತದ ಐಸಿರಿ” ಕಾರ್ಯಕ್ರಮದಡಿಯಲ್ಲಿ ನೇಜಿನಾಟಿ ಮಾಡಲಿದ್ದಾರೆ ಎಂದು ಬದುಕು ಕಟ್ಟೋಣ ತಂಡದ ಸಂಚಾಲಕ ಕೆ. ಮೋಹನ್ ಕುಮಾರ್ ತಿಳಿಸಿದರು.


ಅವರು ಅ.15 ರಂದು ಉಜಿರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.


5೦೦ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ನೇಜಿ ನಾಟಿಯಲ್ಲಿ ಭಾಗವಹಿಸಲಿದ್ದು, ಮುಂದೆ ಬೆಳೆಯ ರಕ್ಷಣೆ, ಕಟಾವು ಮಾಡಿ ಭತ್ತದಿಂದ ಅಕ್ಕಿ ಪಡೆದು ಅಕ್ಕಿಯನ್ನು ಸ್ಥಳೀಯ ದೇವಸ್ಥಾನಗಳಿಗೆ ಅರ್ಪಿಸಲಾಗುವುದು. ಬೈಹುಲ್ಲನ್ನು “ನಂದಗೋಕುಲ” ಗೋಶಾಲೆಗೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.


ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ. ಮಹೇಶ್ ಕುಮಾರ್ ಶೆಟ್ಟಿ ಮಾತನಾಡಿ, ಯುವಜನತೆ ದೇಶದ ಅಮೂಲ್ಯ ಮಾನವಸಂಪನ್ಮೂಲವಾಗಿದ್ದು, ಕೃಷಿಯಲ್ಲಿ ಖುಷಿ ಕಾಣಬೇಕು ಹಾಗೂ  ಕೃಷಿ ಭೂಮಿಯ ಸಮರ್ಪಕ ಬಳಕೆಯಾಗಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಚೈತ್ರೇಶ್ ಇಳಂತಿಲ ಶುಭಾಶಂಸನೆ ಮಾಡಿದರು.
ಉಜಿರೆಯ ಸೋನಿಯಾವರ್ಮ ನೇಜಿನಾಟಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕೃಷಿ ಋಷಿ ಬಿ.ಕೆ. ದೇವರಾವ್ ಅವರನ್ನು ಗೌರವಿಸಲಾಗುವುದು.

ರಾಜೇಶ್ ಪೈ, ಸಂದೀಪ್ ಕುಮಾರ್ ಮತ್ತು ಶ್ರೀಧರ ಕೆ.ವಿ. ಉಪಸ್ಥಿತರಿದ್ದು ಪೂರಕ ಮಾಹಿತಿ ನೀಡಿದರು.

Related posts

ಚುನಾವಣೆ ಮತ್ತು ಅಪರಾಧದ ತಡೆ ಬಗ್ಗೆ ಮಾಹಿತಿ

Suddi Udaya

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಪ್ಪಿನಂಗಡಿಯ ವೃತ್ತಕ್ಕೆ ಸ್ವಾತಂತ್ರ್ಯ ಹೋರಾಟಗಾರ ಉಬಾರ್ ಮಂಜ ಬೈದ್ಯರ ಹೆಸರಿನಲ್ಲಿ ನಾಮಕರಣ ಮಾಡಲು ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಮನವಿ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷರಾಗಿ ಕೆ‌ ಧರಣೇಂದ್ರ ಜೈನ್ ಆಯ್ಕೆ

Suddi Udaya
error: Content is protected !!