24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು..

ಶಿಬಿರವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರು (MRW ) ಆದ ಜೋನ್ ಬ್ಯಾಪಿಸ್ಟ್ ರವರ ಮಾರ್ಗದರ್ಶನದಲ್ಲಿ ನಡೆಸಲಾಯಿತು ಹಾಗೂ ಈ ಶಿಬಿರವನ್ನು ಇನ್ನಷ್ಟು ಅರ್ಥಪೂರ್ಣವಾಗಿ ನಡೆಸಿಕೊಳ್ಳಲು ತಾಲೂಕಿನ ನಗರ ಪುನರ್ವಸತಿ ಕಾರ್ಯಕರ್ತರು ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರ ಸಹಕಾರದೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಲಾಯಿತು.

ಜಿಲ್ಲಾ ಆಸ್ಪತ್ರೆಯಾದ ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ವೈದ್ಯರ ಮೂಲಕ ಹಾಗೂ ಸಿಬ್ಬಂದಿ ವರ್ಗದವರ ಉಪಸ್ಥಿತಿಯಲ್ಲಿ ತಾಲೂಕಿನ ಅನೇಕ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಅವರಿಗೆ ಸಿಗಬೇಕಾದ ಸರ್ಕಾರ ಸೌಲಭ್ಯ ಯೋಜನೆಗಳನ್ನು ಪಡೆದುಕೊಳ್ಳಲು ಸಹಕಾರ ಆಗಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಮಾಡಿಕೊಡಲಾಯಿತು.

Related posts

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 51.29 ಮತದಾನ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya
error: Content is protected !!