24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

ಅಳದಂಗಡಿ: ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ ಇವರ ಆಯೋಜಕತ್ವದಲ್ಲಿ ಪ್ರಪ್ರಥಮ ಬಾರಿಗೆ ಅಳದಂಗಡಿಯಲ್ಲಿ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಹಾಗೂ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವು ಅ. 17 ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ವಠಾರದಲ್ಲಿ ನಡೆಯಲಿದೆ.

ಆರೋಗ್ಯ ಮೇಳ ಉದ್ಘಾಟನೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಳದಂಗಡಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರದ ಅಧ್ಯಕ್ಷ ದೇವದಾಸ್ ಕೆ. ಸಾಲ್ಯಾನ್ ವಹಿಸಲಿದ್ದಾರೆ.

ಬೆಳಿಗ್ಗೆ 9.30 ಕ್ಕೆ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈಭವ, ಬೆಳಿಗ್ಗೆ 10 ಕ್ಕೆ ಅಳದಂಗಡಿ ಪೇಟೆಯಿಂದ ಕಾರ್ಗಿಲ್ ಯೋಧರ ಬೃಹತ್ ಮೆರವಣಿಗೆಗೆ ಡಾ. ಎನ್. ಯಂ ತುಳುಪುಳೆ ಅಳದಂಗಡಿ ರವರು ಚಾಲನೆ ನೀಡಲಿದ್ದಾರೆ.

ಬೆಳಿಗ್ಗೆ 11.00 ಕ್ಕೆ ಸಭಾಕಾರ್ಯಕ್ರಮದಲ್ಲಿ ದೇಶಕ್ಕಾಗಿ ಸೇವೆಗೈದ ಕಾರ್ಗಿಲ್ ವೀರ ಯೋಧರು ಮತ್ತು ನಿಸ್ವಾರ್ಥ ಸೇವೆಗೈಯುತ್ತಿರುವ ಸಾಮಾಜಿಕ ಕಾರ್ಯಕರ್ತರಾದ ಕ್ಯಾಪ್ಟನ್ ನವೀನ್ ನಾಗಪ್ಪ, ಶ್ರೀರಂಗಪ್ಪ ಹುಲಿಯಪ್ಪ ಆಲೂರು, ಹರೀಶ್ ರೈ.ಪಿ., ಡಾ. ರವಿ ಕಕ್ಕೆಪದವು ಜನಸ್ನೇಹಿ ಯೋಗೀಶ್ ರವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವು ನಡೆಯಲಿದೆ.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರದ ಗೌರವ ಅಧ್ಯಕ್ಷ ಶಿವಪ್ರಸಾದ್ ಅಜಿಲರು ವಹಿಸಲಿದ್ದಾರೆ. ಹಾಗೂ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

Related posts

ಕೆ.ಪಿ.ಸಿ.ಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ವಲಯ ಮಟ್ಟದ ಶಾಲೆ ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

Suddi Udaya

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!