37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

ಅಳದಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಸೇವೆಗಾಗಿ ಕ್ರೀಡೆ ಎಂಬ ಪರಿಕಲ್ಪನೆಯಡಿ ಕಳೆದ ಏಳು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸುತ್ತಿರುವ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ಮಾಸಿಕ ಸಭೆಯು ಅ.13 ಸ.ಉ.ಪ್ರಾ ಶಾಲೆ ಬಡಗಕಾರಂದೂರು ಇಲ್ಲಿನ ವಠಾರದಲ್ಲಿ ಜರುಗಿತು.

ಸಂಘಟನೆಯ ಸದಸ್ಯತ್ವ ವಿಸ್ತರಣೆ,ಮುಂಬರುವ ಆವೃತ್ತಿಯ ತಯಾರಿ,ರೂಪುರೇಷೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು ಹಾಗೂ ಸಂಘಟನೆಯ ‘ಸ್ವಾವಲಂಬಿ’ ಮಹಿಳಾ ಸಶಕ್ತೀಕರಣ ಯೋಜನೆಯಡಿ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲಾಯಿತು.

ಸಂಘಟನೆಯ ಪ್ರಧಾನ ಸಂಚಾಲಕ ಸಂದೀಪ್ ಎಸ್ ನೀರಲ್ಕೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ಅರ್ಚಕರಾದ ಪ್ರವೀಣ್ ಮಯ್ಯ ಹಾಗೂ ಸಂಘಟನೆಯ ಸಲಹೆಗಾರರಾದ ಇಸಾಕ್ ರವರು ಹೊಲಿಗೆ ಯಂತ್ರ ವಿತರಿಸಿ ಶುಭ ಹಾರೈಸಿದರು. ಸಭೆಯಲ್ಲಿ ಸಲಹೆಗಾರರಾದ ಉಮೇಶ್ ಸುವರ್ಣ,ಜಯ ಪೂಜಾರಿ,ಅತುಲ್ ಕಾರಂತ್, ಶ್ರೀನಾಥ್ ಶೆಟ್ಟಿ,ಅವಿನಾಶ್,ಪ್ರಧಾನ ಕಾರ್ಯದರ್ಶಿ ರಕ್ಷಿತ್ ಎಬಿ,ಕೋಶಾಧಿಕಾರಿ ವಿಶ್ವನಾಥ್ ಕಾಶಿಪಟ್ನ,ಕ್ರೀಡಾ ಸಂಯೋಜಕ ಜಯಾನಂದ ಎ,ಸದಸ್ಯರಾದ ಅಭಿಷೇಕ್ ನೀರಲ್ಕೆ,ಇರ್ಷಾದ್,ಸಚಿನ್,ಯಕ್ಷಿತ್,ಪ್ರಶಾಂತ್ ಭಂಡಾರಿ,ಮಹಮ್ಮದ್ ಶರೀಫ್,ಶರತ್ ಬಿಕ್ಕಿರ,ಉಮೇಶ್ ದೇವಾಡಿಗ ಉಪಸ್ಥಿತರಿದ್ದರು.

Related posts

ವಾಣಿ ಆಂ.ಮಾ. ಶಾಲೆಯ ಕು. ಶಾನ್ವಿ ಕುಲಾಲ್ ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya
error: Content is protected !!