July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

ಅಳದಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಸೇವೆಗಾಗಿ ಕ್ರೀಡೆ ಎಂಬ ಪರಿಕಲ್ಪನೆಯಡಿ ಕಳೆದ ಏಳು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸುತ್ತಿರುವ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ಬೆಳ್ತಂಗಡಿ ಇದರ ಮಾಸಿಕ ಸಭೆಯು ಅ.13 ಸ.ಉ.ಪ್ರಾ ಶಾಲೆ ಬಡಗಕಾರಂದೂರು ಇಲ್ಲಿನ ವಠಾರದಲ್ಲಿ ಜರುಗಿತು.

ಸಂಘಟನೆಯ ಸದಸ್ಯತ್ವ ವಿಸ್ತರಣೆ,ಮುಂಬರುವ ಆವೃತ್ತಿಯ ತಯಾರಿ,ರೂಪುರೇಷೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು ಹಾಗೂ ಸಂಘಟನೆಯ ‘ಸ್ವಾವಲಂಬಿ’ ಮಹಿಳಾ ಸಶಕ್ತೀಕರಣ ಯೋಜನೆಯಡಿ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲಾಯಿತು.

ಸಂಘಟನೆಯ ಪ್ರಧಾನ ಸಂಚಾಲಕ ಸಂದೀಪ್ ಎಸ್ ನೀರಲ್ಕೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ಅರ್ಚಕರಾದ ಪ್ರವೀಣ್ ಮಯ್ಯ ಹಾಗೂ ಸಂಘಟನೆಯ ಸಲಹೆಗಾರರಾದ ಇಸಾಕ್ ರವರು ಹೊಲಿಗೆ ಯಂತ್ರ ವಿತರಿಸಿ ಶುಭ ಹಾರೈಸಿದರು. ಸಭೆಯಲ್ಲಿ ಸಲಹೆಗಾರರಾದ ಉಮೇಶ್ ಸುವರ್ಣ,ಜಯ ಪೂಜಾರಿ,ಅತುಲ್ ಕಾರಂತ್, ಶ್ರೀನಾಥ್ ಶೆಟ್ಟಿ,ಅವಿನಾಶ್,ಪ್ರಧಾನ ಕಾರ್ಯದರ್ಶಿ ರಕ್ಷಿತ್ ಎಬಿ,ಕೋಶಾಧಿಕಾರಿ ವಿಶ್ವನಾಥ್ ಕಾಶಿಪಟ್ನ,ಕ್ರೀಡಾ ಸಂಯೋಜಕ ಜಯಾನಂದ ಎ,ಸದಸ್ಯರಾದ ಅಭಿಷೇಕ್ ನೀರಲ್ಕೆ,ಇರ್ಷಾದ್,ಸಚಿನ್,ಯಕ್ಷಿತ್,ಪ್ರಶಾಂತ್ ಭಂಡಾರಿ,ಮಹಮ್ಮದ್ ಶರೀಫ್,ಶರತ್ ಬಿಕ್ಕಿರ,ಉಮೇಶ್ ದೇವಾಡಿಗ ಉಪಸ್ಥಿತರಿದ್ದರು.

Related posts

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಜು.29ರಿಂದ ಸೆ.14ರವರೆಗೆ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ: ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆ: ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಸಮಾಜಕಾರ್ಯ ಪದವೀಧರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಸಿನರ್ಜಿ ಎಚ್‌ಆರ್‌ಡಿ ಸರಣಿ ಕಾರ್ಯಕ್ರಮ

Suddi Udaya

ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣ : ಪ್ರಭಾಕರ ಹೆಗ್ಡೆಗೆ ನಿರೀಕ್ಷಣಾ ಜಾಮೀನು

Suddi Udaya

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

Suddi Udaya
error: Content is protected !!