September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

ಉಜಿರೆ: ಆರೋಗ್ಯಕರ ಜೀವನಕ್ಕೆ ಕೈಯ ಶುಚಿತ್ವವೂ ಕೂಡ ಅತಿ ಮುಖ್ಯ. ಇತ್ತೀಚಿನ ವರದಿಯ ಪ್ರಕಾರ ಕೈಯ ಅಸುರಕ್ಷತೆಯಿಂದ ಪ್ರತಿ ವರ್ಷ 3.5 ಮಿಲಿಯನ್ ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಡಯೇರಿಯಾ ಹಾಗೂ ನ್ಯೂಮೆನಿಯಾದಂತಹ ಕಾಯಿಲೆಗಳು ಕೈ ತೊಳೆಯದೆ ಆಹಾರ ಸೇವಿಸುವುದರಿಂದ ಬರುತ್ತವೆ. ಈಗ ಕೊರೋನ ವೈರಸ್ ಕೂಡ ಸೇರ್ಪಡೆಯಾಗಿದೆ. ಕೈಯ ಅಸುರಕ್ಷತೆ ಬಗ್ಗೆ ಕಳವಳಗೊಂಡ ವಿಶ್ವ ಆರೋಗ್ಯ ಸಂಸ್ಥೆಯು 2008 ರಿಂದ ವಿಶ್ವ ಕೈ ತೊಳೆಯುವ ದಿನವನ್ನಾಗಿ ಘೋಷಿಸಿದೆ. ಇದೀಗ ಸುಮಾರು 70 ದೇಶಕ್ಕಿಂತಲೂ ಹೆಚ್ಚು ದೇಶಗಳಲ್ಲಿ ಕೈ ತೊಳೆಯುವ ದಿನದಂದು ವೈಜ್ಞಾನಿಕವಾಗಿ ಕೈ ತೊಳೆಯುವ ವಿಧಾನಗಳ ಬಗ್ಗೆ ತಿಳಿಸುವ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಕೈ ತೊಳೆಯುವ ದಿನಾಚರಣೆ ಪ್ರಯುಕ್ತ ವೈಜ್ಞಾನಿಕವಾಗಿ ಕೈ ತೊಳೆಯುವ ವಿಧಾನದ ಪ್ರಾತ್ಯಕ್ಷಿಕೆ ನಡೆಸಿ ಮಾತನಾಡಿದರು.

ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.
ಶ್ರೀಹರಿ ಹಾಗೂ ಗೌತಮಿ ಜಿ. ಪ್ರಾತ್ಯಕ್ಷಿಕೆಯಲ್ಲಿ ಭಾಗವಸಿದರು. ಘಟಕದ ನಾಯಕ ಆದಿತ್ಯ ವಿ. ಸ್ವಾಗತಿಸಿ , ವಂದಿಸಿದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರ ನೇಮಕ : ದಾಖಲೆಗಳನ್ನು ಹಾಜರು ಪಡಿಸುವಂತೆ ಹೈಕೋರ್ಟ್ ಸೂಚನೆ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಿದ್ಧಶ್ರೀ ಪ್ರಶಸ್ತಿ

Suddi Udaya

ವೇಣೂರು ಕುಂಭಶ್ರೀ ಆಂ.ಮಾ. ಶಾಲೆಗೆ ಪ್ರಮೋದ್ ಶೆಟ್ಟಿ ರವರಿಂದ ಫ್ಯಾನ್ ಕೊಡುಗೆ

Suddi Udaya

ಬೆಳ್ತಂಗಡಿ ಲಯನ್ಸ್ ಹಾಗೂ ಲಿಯೋ ಕ್ಲಬ್ ವತಿಯಿಂದ ಮಾದಕ ವಸ್ತುಗಳ ಜಾಗೃತಿ ಶಿಬಿರ

Suddi Udaya

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

Suddi Udaya

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!