23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

ಉಜಿರೆ: ಆರೋಗ್ಯಕರ ಜೀವನಕ್ಕೆ ಕೈಯ ಶುಚಿತ್ವವೂ ಕೂಡ ಅತಿ ಮುಖ್ಯ. ಇತ್ತೀಚಿನ ವರದಿಯ ಪ್ರಕಾರ ಕೈಯ ಅಸುರಕ್ಷತೆಯಿಂದ ಪ್ರತಿ ವರ್ಷ 3.5 ಮಿಲಿಯನ್ ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಡಯೇರಿಯಾ ಹಾಗೂ ನ್ಯೂಮೆನಿಯಾದಂತಹ ಕಾಯಿಲೆಗಳು ಕೈ ತೊಳೆಯದೆ ಆಹಾರ ಸೇವಿಸುವುದರಿಂದ ಬರುತ್ತವೆ. ಈಗ ಕೊರೋನ ವೈರಸ್ ಕೂಡ ಸೇರ್ಪಡೆಯಾಗಿದೆ. ಕೈಯ ಅಸುರಕ್ಷತೆ ಬಗ್ಗೆ ಕಳವಳಗೊಂಡ ವಿಶ್ವ ಆರೋಗ್ಯ ಸಂಸ್ಥೆಯು 2008 ರಿಂದ ವಿಶ್ವ ಕೈ ತೊಳೆಯುವ ದಿನವನ್ನಾಗಿ ಘೋಷಿಸಿದೆ. ಇದೀಗ ಸುಮಾರು 70 ದೇಶಕ್ಕಿಂತಲೂ ಹೆಚ್ಚು ದೇಶಗಳಲ್ಲಿ ಕೈ ತೊಳೆಯುವ ದಿನದಂದು ವೈಜ್ಞಾನಿಕವಾಗಿ ಕೈ ತೊಳೆಯುವ ವಿಧಾನಗಳ ಬಗ್ಗೆ ತಿಳಿಸುವ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಕೈ ತೊಳೆಯುವ ದಿನಾಚರಣೆ ಪ್ರಯುಕ್ತ ವೈಜ್ಞಾನಿಕವಾಗಿ ಕೈ ತೊಳೆಯುವ ವಿಧಾನದ ಪ್ರಾತ್ಯಕ್ಷಿಕೆ ನಡೆಸಿ ಮಾತನಾಡಿದರು.

ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.
ಶ್ರೀಹರಿ ಹಾಗೂ ಗೌತಮಿ ಜಿ. ಪ್ರಾತ್ಯಕ್ಷಿಕೆಯಲ್ಲಿ ಭಾಗವಸಿದರು. ಘಟಕದ ನಾಯಕ ಆದಿತ್ಯ ವಿ. ಸ್ವಾಗತಿಸಿ , ವಂದಿಸಿದರು.

Related posts

ಭಾರಿ ಮಳೆಯಿಂದಾಗಿ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತ: ಅಡಿಕೆ ಗಿಡಗಳು ನೀರು ಪಾಲು

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಉಜಿರೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಉಷಾ ಕಾರಂತ್, ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

Suddi Udaya

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya

ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

Suddi Udaya
error: Content is protected !!