July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

ಉಜಿರೆ: ಆರೋಗ್ಯಕರ ಜೀವನಕ್ಕೆ ಕೈಯ ಶುಚಿತ್ವವೂ ಕೂಡ ಅತಿ ಮುಖ್ಯ. ಇತ್ತೀಚಿನ ವರದಿಯ ಪ್ರಕಾರ ಕೈಯ ಅಸುರಕ್ಷತೆಯಿಂದ ಪ್ರತಿ ವರ್ಷ 3.5 ಮಿಲಿಯನ್ ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಡಯೇರಿಯಾ ಹಾಗೂ ನ್ಯೂಮೆನಿಯಾದಂತಹ ಕಾಯಿಲೆಗಳು ಕೈ ತೊಳೆಯದೆ ಆಹಾರ ಸೇವಿಸುವುದರಿಂದ ಬರುತ್ತವೆ. ಈಗ ಕೊರೋನ ವೈರಸ್ ಕೂಡ ಸೇರ್ಪಡೆಯಾಗಿದೆ. ಕೈಯ ಅಸುರಕ್ಷತೆ ಬಗ್ಗೆ ಕಳವಳಗೊಂಡ ವಿಶ್ವ ಆರೋಗ್ಯ ಸಂಸ್ಥೆಯು 2008 ರಿಂದ ವಿಶ್ವ ಕೈ ತೊಳೆಯುವ ದಿನವನ್ನಾಗಿ ಘೋಷಿಸಿದೆ. ಇದೀಗ ಸುಮಾರು 70 ದೇಶಕ್ಕಿಂತಲೂ ಹೆಚ್ಚು ದೇಶಗಳಲ್ಲಿ ಕೈ ತೊಳೆಯುವ ದಿನದಂದು ವೈಜ್ಞಾನಿಕವಾಗಿ ಕೈ ತೊಳೆಯುವ ವಿಧಾನಗಳ ಬಗ್ಗೆ ತಿಳಿಸುವ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಕೈ ತೊಳೆಯುವ ದಿನಾಚರಣೆ ಪ್ರಯುಕ್ತ ವೈಜ್ಞಾನಿಕವಾಗಿ ಕೈ ತೊಳೆಯುವ ವಿಧಾನದ ಪ್ರಾತ್ಯಕ್ಷಿಕೆ ನಡೆಸಿ ಮಾತನಾಡಿದರು.

ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.
ಶ್ರೀಹರಿ ಹಾಗೂ ಗೌತಮಿ ಜಿ. ಪ್ರಾತ್ಯಕ್ಷಿಕೆಯಲ್ಲಿ ಭಾಗವಸಿದರು. ಘಟಕದ ನಾಯಕ ಆದಿತ್ಯ ವಿ. ಸ್ವಾಗತಿಸಿ , ವಂದಿಸಿದರು.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya
error: Content is protected !!