30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

ಉಜಿರೆ : ಮಾಡುವ ಕೆಲಸದಲ್ಲಿ ತೃಪ್ತಿ, ಆ ಕೆಲಸದ ಕುರಿತು ಆಳವಾದ ಅರಿವು ಹಾಗೂ ಜೀವನದಲ್ಲಿ ಶಿಸ್ತು, ಸಮಯಪ್ರಜ್ಞೆ ಇರುವುದು ಅಗತ್ಯ ಎಂದು ಹಿರಿಯ ಸಾಹಿತಿ, ನಿವೃತ್ತ ಇಂಜಿನಿಯರ್ ಕುಮಾರಸ್ವಾಮಿ ಟಿ. ಹೇಳಿದರು.

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ಸರಣಿ ‘ಎಸ್ ಡಿ ಎಂ ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮದಲ್ಲಿ ಅವರು ಪ್ರತಿಭಾನ್ವಿತ ವಿದ್ಯಾರ್ಥಿ ನಿತಿನ್ ಎಸ್.ಜೆ. (ದ್ವಿತೀಯ ಬಿ.ಎ.) ಅವರಿಗೆ 5,000 ರೂ. ಸಹಾಯಧನ ಹಸ್ತಾಂತರಿಸಿ ಮಾತನಾಡಿದರು.
“ತೃಪ್ತಿ ಇದ್ದಲ್ಲಿ ನಾವು ಭ್ರಷ್ಟಾಚಾರಕ್ಕೆ ಒಳಗಾಗದೆ ಬದುಕಬಹುದು. ಏನನ್ನಾದಾರೂ ಸಾಧಿಸಬೇಕಾದರೆ ಮೊದಲು ಅಹಂಕಾರ ಬಿಡಬೇಕು. ಹಾಗಿದ್ದಾಗ ಸಾಧಿಸುವ ಅವಕಾಶಗಳು ಹೇರಳವಾಗಿ ದೊರೆಯುತ್ತವೆ. ಶಿಸ್ತು ಇತ್ಯಾದಿ ಮೌಲ್ಯಗಳಿದ್ದಾಗ ಯಶಸ್ಸು ಸಾಧ್ಯವಾಗುತ್ತದೆ” ಎಂದು ಅವರು ಕಿವಿಮಾತು ಹೇಳಿದರು.


ಸಿದ್ಧವನ ಗುರುಕುಲದಲ್ಲಿ ತಾವು ಕಳೆದ ದಿನಗಳನ್ನು ಮೆಲುಕು ಹಾಕಿದ ಅವರು, “ಸಾಮರಸ್ಯ, ಸಹಬಾಳ್ವೆಯಂತಹ ಮೌಲ್ಯಗಳನ್ನು ಸಿದ್ಧವನ ಕಲಿಸಿದೆ, ಉತ್ತಮ ಗೆಳೆಯರನ್ನು ನೀಡಿದೆ” ಎಂದರು.


ಜೀವನ ಕೇವಲ 60 ವರ್ಷಗಳವರೆಗೆ ಅಲ್ಲ. ಅದರ ಮೇಲೂ ಇದೆ. ಯೋಗಾಭ್ಯಾಸ, ಓದು ಇತ್ಯಾದಿ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡರೆ ವಿಶ್ರಾಂತ ಜೀವನದಲ್ಲಿ ಅವು ನೆರವಾಗುತ್ತವೆ ಎಂದು ಅವರು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪ ಪ್ರಾಂಶುಪಾಲ ಎಸ್. ಎನ್. ಕಾಕತ್ಕರ್, “ಯಾವುದೇ ಶಿಕ್ಷಣ ಸಂಸ್ಥೆ ಬೆಳೆಯಬೇಕಾದರೆ ಉತ್ತಮ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು, ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳು ಅಗತ್ಯ. ನಮ್ಮ ಕಾಲೇಜಿನಲ್ಲಿ ಈ ಎಲ್ಲ ಅಂಶಗಳೂ ಸಾಂಸ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುತ್ತಿವೆ. ಹಳೆ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ವಿತರಣೆ, ಬಿಸಿಯೂಟ ಯೋಜನೆಗೆ ಆರ್ಥಿಕ ನೆರವು ಇತ್ಯಾದಿ ಕಾರ್ಯಗಳನ್ನು ಮಾಡುತ್ತಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.


ಕಾರ್ಯಕ್ರಮ ಸಂಯೋಜಕ ಡಾ. ಎಂ. ಪಿ. ಶ್ರೀನಾಥ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪ್ರಾಧ್ಯಾಪಕ ಗುರುರಾಜ್ ಭಟ್ ವಂದಿಸಿದರು.

Related posts

ಪದ್ಮುಂಜ: ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಸಿದ್ದತಾ ಸಭೆ: ಶಾಸಕ ಹರೀಶ್ ಪೂಂಜ ರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು

Suddi Udaya

ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕೋರಂ ಕೊರತೆ; ಉಜಿರೆ ಗ್ರಾಮಸಭೆ ಮುಂದೂಡಿಕೆ

Suddi Udaya

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya
error: Content is protected !!