September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

ಬೆಳ್ತಂಗಡಿ ತಾಲೂಕಿನ ರೈತ ಬಾಂಧವರ ಗಮನಕ್ಕೆ ತಾಲೂಕಿನ ಪ್ರಮುಖ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು, ಕಾಳುಮೆಣಸು ಹಾಗೂ ಕೋಕೋ ಬೆಳೆಗಳಿಗೆ ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಹಾಗೂ ಪೋಷಕಾಂಶಗಳ ನಿರ್ವಹಣೆ ಕೊರತೆಯಿಂದಾಗಿ ಕೀಟ ಮತ್ತು ರೋಗಗಳ ಬಾಧೆ ತೀವ್ರಗೊಂಡು ರೈತರು ಆರ್ಥಿಕ ನಷ್ಟ ಅನುಭವಿಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ.

2024-25ನೇ ಸಾಲಿನ ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ ಯೋಜನೆಯಡಿ ಶೇ 75ರ ರಿಯಾಯಿತಿ ದರದಲ್ಲಿ ಈ ಕೆಳಕಂಡ ಔಷಧಿಗಳು ಲಭ್ಯವಿದ್ದು ರೈತರು ಸದುಪಯೋಗಪಡಿಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಕೋರಿದೆ. ಶಿಲೀಂದ್ರದಿಂದ ಉದ್ಭವಿಸುವ ರೋಗಗಳಿಗೆ Mancozeb 75% WP (2 ಗ್ರಾಂ/ಲೀ) ಮತ್ತು Propiconazole 25% EC (1 ml/ಲೀ) ಹಾಗೂ ರಸ ಹೀರುವ ಕೀಟಗಳ ಆತೋಟಿಗಾಗಿ Thiamethoxam 25% WG( 0.25 ml/ಲೀ) ಸಿಂಪಡಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ ಬೆಳ್ತಂಗಡಿ ಹೋಬಳಿ ಮಹಾವೀರ ಶೇಬಣ್ಣವರ ನೇ, ಮೊಬೈಲ್ ನಂ: 8123921087 ವೇಣೂರು ಹೋಬಳಿ ಭೀಮರಾಯ ಸೊಡ್ಡಗಿ, ಮೊಬೈಲ್ ನಂ: 9741713598 , ಕೊಕ್ಕಡ ಹೋಬಳಿ ಮಲ್ಲಿನಾಥ ಬಿರಾದಾರ ಮೊ.ನಂ. 9986411477ಮ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್ ಮೊ.ನಂ. 9448336863 .

Related posts

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಗುರುಗಳ 169 ನೇ ಜಯಂತಿ ಆಚರಣೆ, ನೂತನ ಆಡಳಿತ ಮಂಡಳಿಯ ಪದ ಪ್ರಧಾನ ಸಮಾರಂಭ

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನ್ಯೂ ರೋಹಿಣಿ ಜ್ಯೂಸ್ ಸೆಂಟರ್ ಮಾಲಕ ಧನಂಜಯ ಹೃದಯಾಘಾತದಿಂದ ನಿಧನ: ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಇದ್ದರೂ ದೊರೆಯದ ಸೌಲಭ್ಯ: ಸಾರ್ವಜನಿಕರ ಆಕ್ರೋಶ

Suddi Udaya
error: Content is protected !!