22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

ಬೆಳ್ತಂಗಡಿ ತಾಲೂಕಿನ ರೈತ ಬಾಂಧವರ ಗಮನಕ್ಕೆ ತಾಲೂಕಿನ ಪ್ರಮುಖ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು, ಕಾಳುಮೆಣಸು ಹಾಗೂ ಕೋಕೋ ಬೆಳೆಗಳಿಗೆ ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಹಾಗೂ ಪೋಷಕಾಂಶಗಳ ನಿರ್ವಹಣೆ ಕೊರತೆಯಿಂದಾಗಿ ಕೀಟ ಮತ್ತು ರೋಗಗಳ ಬಾಧೆ ತೀವ್ರಗೊಂಡು ರೈತರು ಆರ್ಥಿಕ ನಷ್ಟ ಅನುಭವಿಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ.

2024-25ನೇ ಸಾಲಿನ ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ ಯೋಜನೆಯಡಿ ಶೇ 75ರ ರಿಯಾಯಿತಿ ದರದಲ್ಲಿ ಈ ಕೆಳಕಂಡ ಔಷಧಿಗಳು ಲಭ್ಯವಿದ್ದು ರೈತರು ಸದುಪಯೋಗಪಡಿಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಕೋರಿದೆ. ಶಿಲೀಂದ್ರದಿಂದ ಉದ್ಭವಿಸುವ ರೋಗಗಳಿಗೆ Mancozeb 75% WP (2 ಗ್ರಾಂ/ಲೀ) ಮತ್ತು Propiconazole 25% EC (1 ml/ಲೀ) ಹಾಗೂ ರಸ ಹೀರುವ ಕೀಟಗಳ ಆತೋಟಿಗಾಗಿ Thiamethoxam 25% WG( 0.25 ml/ಲೀ) ಸಿಂಪಡಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ ಬೆಳ್ತಂಗಡಿ ಹೋಬಳಿ ಮಹಾವೀರ ಶೇಬಣ್ಣವರ ನೇ, ಮೊಬೈಲ್ ನಂ: 8123921087 ವೇಣೂರು ಹೋಬಳಿ ಭೀಮರಾಯ ಸೊಡ್ಡಗಿ, ಮೊಬೈಲ್ ನಂ: 9741713598 , ಕೊಕ್ಕಡ ಹೋಬಳಿ ಮಲ್ಲಿನಾಥ ಬಿರಾದಾರ ಮೊ.ನಂ. 9986411477ಮ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್ ಮೊ.ನಂ. 9448336863 .

Related posts

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya

ಪುದುವೆಟ್ಟು ಓಂ ಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 548ನೇಯ ಯೋಜನೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ:ಶಾಲಾ ಮಕ್ಕಳಿಗೆ ಊಟದ ಬಟ್ಟಲು, ಲೋಟ ಮತ್ತು ತಟ್ಟೆ ಹಸ್ತಾಂತರ ಕಾರ್ಯಕ್ರಮ ನಡೆಯಿತು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!