April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

ವೇಣೂರು: ಗೋಳಿಯಂಗಡಿಯಲ್ಲಿರುವ ಐಟಿಐ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಸಜೀಪ ಮೂಲದ ಹುಲ್ಲು ತೆಗೆಯುವ ಮೆಷಿನ್ ರಿಪೇರಿ ಕೆಲಸ ಮಾಡುವ ಜಮಾಲ್ ಬಂಧಿತ ಆರೋಪಿ. ಈತ ವಿದ್ಯಾರ್ಥಿನಿಯರ ಮೊಬೈಲ್ ನಂಬರ್ ಕೇಳುತ್ತಿದ್ದು, ಕಾಲೇಜಿಗೆ ಬೈಕಿನಲ್ಲಿ ಡ್ರಾಪ್ ಮಾಡುತ್ತೇನೆ ಎಂದು ಹೇಳುತ್ತಾ ಅನುಚಿತವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ.

ಯುವಕನ ವರ್ತನೆಯಿಂದ ಗಾಬರಿಗೊಂಡಿದ್ದ ವಿದ್ಯಾರ್ಥಿನಿಯರು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದರು. ಅವರು ಆರೋಪಿಯನ್ನು ವಿಚಾರಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕಾಶಿಬೆಟ್ಟು ಹೆದ್ದಾರಿಯಲ್ಲಿ ನಿಮಾ೯ಣವಾದ ಬಾವಿಯಾಕಾರದ ಹೊಂಡ, ಗುಂಡಿಗಳು ಸಂಚಾರಕ್ಕೆ ವಾಹನಗಳ ಪರದಾಟ, ಪ್ರತಿದಿನ ವಾಹನ ಬ್ಲಾಕ್

Suddi Udaya

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya
error: Content is protected !!