September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

ವೇಣೂರು: ಗೋಳಿಯಂಗಡಿಯಲ್ಲಿರುವ ಐಟಿಐ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಸಜೀಪ ಮೂಲದ ಹುಲ್ಲು ತೆಗೆಯುವ ಮೆಷಿನ್ ರಿಪೇರಿ ಕೆಲಸ ಮಾಡುವ ಜಮಾಲ್ ಬಂಧಿತ ಆರೋಪಿ. ಈತ ವಿದ್ಯಾರ್ಥಿನಿಯರ ಮೊಬೈಲ್ ನಂಬರ್ ಕೇಳುತ್ತಿದ್ದು, ಕಾಲೇಜಿಗೆ ಬೈಕಿನಲ್ಲಿ ಡ್ರಾಪ್ ಮಾಡುತ್ತೇನೆ ಎಂದು ಹೇಳುತ್ತಾ ಅನುಚಿತವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ.

ಯುವಕನ ವರ್ತನೆಯಿಂದ ಗಾಬರಿಗೊಂಡಿದ್ದ ವಿದ್ಯಾರ್ಥಿನಿಯರು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದರು. ಅವರು ಆರೋಪಿಯನ್ನು ವಿಚಾರಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಹಿರಿಯ ಧರ್ಮಗುರು ಅಹ್ಮದ್ ಕುಂಞಿ ಮುಸ್ಲಿಯಾರ್ ಬೀಟಿಗೆ ನಿಧನ

Suddi Udaya

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಅತ್ಯುನ್ನತ ಸಾಧನೆ : ಕಾಲೇಜಿಗೆ ಹೆಮ್ಮೆ ತಂದ ಫಲಿತಾಂಶ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

Suddi Udaya
error: Content is protected !!