March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆಯು ಮೊದಲ ಬಾರಿಗೆ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಹಾಗೂ ನಿಡ್ಲೆ ಅಗ್ರೀಲೀಫ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ “ಹೇ ಶಾರದೆ” ಫೋಟೊ ಸ್ಪರ್ಧೆ” ಆಯೋಜಿಸಿತ್ತು.

ಇದರ ಫಲಿತಾಂಶವು ಪ್ರಕಟಗೊಂಡಿದ್ದು ಪ್ರಥಮ ಬಹುಮಾನವನ್ನು ಶಾರ್ವಿ ಶೆಟ್ಟಿ ಸುಮುಖ ಸದನ ಕರ್ನೋಡಿ, ದ್ವಿತೀಯ ಬಹುಮಾನವನ್ನು ಓಶ್ಮಿ ಜಿ. ಅಕ್ಕಳ ಮನೆ ಪುತ್ತಿಲ, ತೃತೀಯ ಬಹುಮಾನವನ್ನು ದೀಕ್ಷಿತಾ ಶಿವಾಜಿನಗರ ಲಾಯಿಲ ಇವರು ಪಡೆದುಕೊಂಡಿದ್ದಾರೆ.

ಈ ಹಿಂದೆ ಎರಡು ಬಾರಿ ರಾಧೇ-ಕೃಷ್ಣ ಫೋಟೋ ಸ್ಪರ್ಧೆಯನ್ನು ಬೆಳ್ತಂಗಡಿ ತಾಲೂಕಿನವರಿಗೆ ಆಯೋಜಿಸಿದಾಗ ಹಲವಾರು ತಾಲೂಕಿನ ಹೊರಗಡೆ ಇರುವ ಪತ್ರಿಕೆ ಹಾಗೂ ಆನ್‌ಲೈನ್ ಓದುಗರಿಂದ ನಮಗೂ ಒಂದು ಅವಕಾಶ ನೀಡಿ ಎಂಬ ಬೇಡಿಕೆಯಂತೆ “ಹೇ ಶಾರದೇ” ಎಂಬ ಶಾರದಾ ಫೋಟೋ ಸ್ಪರ್ಧೆ ಆಯೋಜಿಸಿದ್ದು ಅದರಂತೆ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ, ಮಂಗಳೂರು, ಕಾರ್ಕಳದಿಂದ ಇನ್ನೂರಕ್ಕೂ ಮಿಕ್ಕಿ ಫೋಟೋಗಳು ಬಂದಿರುತ್ತದೆ. ಈ ಫೋಟೋ ಸ್ಪರ್ಧೆಯಲ್ಲಿ ಉಜಿರೆ ರಶ್ಮಿ ಸ್ಟುಡಿಯೋದ ರಾಮಕೃಷ್ಣ ರೈ ರವರು ತೀರ್ಪುಗಾರರಾಗಿದ್ದರು.

Related posts

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಬಿಜೆಪಿ ಜಿಲ್ಲಾ ಮಟ್ಟದ ವಿವಿಧ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಎಸ್ ಡಿ ಎಂ ಶಿಕ್ಷಣ ಸಂಸ್ಥೆಯಿಂದ ರೂ. 2.50 ಕೋಟಿ ವಿದ್ಯಾರ್ಥಿವೇತನ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!