September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆಯು ಮೊದಲ ಬಾರಿಗೆ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಹಾಗೂ ನಿಡ್ಲೆ ಅಗ್ರೀಲೀಫ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ “ಹೇ ಶಾರದೆ” ಫೋಟೊ ಸ್ಪರ್ಧೆ” ಆಯೋಜಿಸಿತ್ತು.

ಇದರ ಫಲಿತಾಂಶವು ಪ್ರಕಟಗೊಂಡಿದ್ದು ಪ್ರಥಮ ಬಹುಮಾನವನ್ನು ಶಾರ್ವಿ ಶೆಟ್ಟಿ ಸುಮುಖ ಸದನ ಕರ್ನೋಡಿ, ದ್ವಿತೀಯ ಬಹುಮಾನವನ್ನು ಓಶ್ಮಿ ಜಿ. ಅಕ್ಕಳ ಮನೆ ಪುತ್ತಿಲ, ತೃತೀಯ ಬಹುಮಾನವನ್ನು ದೀಕ್ಷಿತಾ ಶಿವಾಜಿನಗರ ಲಾಯಿಲ ಇವರು ಪಡೆದುಕೊಂಡಿದ್ದಾರೆ.

ಈ ಹಿಂದೆ ಎರಡು ಬಾರಿ ರಾಧೇ-ಕೃಷ್ಣ ಫೋಟೋ ಸ್ಪರ್ಧೆಯನ್ನು ಬೆಳ್ತಂಗಡಿ ತಾಲೂಕಿನವರಿಗೆ ಆಯೋಜಿಸಿದಾಗ ಹಲವಾರು ತಾಲೂಕಿನ ಹೊರಗಡೆ ಇರುವ ಪತ್ರಿಕೆ ಹಾಗೂ ಆನ್‌ಲೈನ್ ಓದುಗರಿಂದ ನಮಗೂ ಒಂದು ಅವಕಾಶ ನೀಡಿ ಎಂಬ ಬೇಡಿಕೆಯಂತೆ “ಹೇ ಶಾರದೇ” ಎಂಬ ಶಾರದಾ ಫೋಟೋ ಸ್ಪರ್ಧೆ ಆಯೋಜಿಸಿದ್ದು ಅದರಂತೆ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ, ಮಂಗಳೂರು, ಕಾರ್ಕಳದಿಂದ ಇನ್ನೂರಕ್ಕೂ ಮಿಕ್ಕಿ ಫೋಟೋಗಳು ಬಂದಿರುತ್ತದೆ. ಈ ಫೋಟೋ ಸ್ಪರ್ಧೆಯಲ್ಲಿ ಉಜಿರೆ ರಶ್ಮಿ ಸ್ಟುಡಿಯೋದ ರಾಮಕೃಷ್ಣ ರೈ ರವರು ತೀರ್ಪುಗಾರರಾಗಿದ್ದರು.

Related posts

ಬೆಳ್ತಂಗಡಿ ರೋಟರಿ ಸೇವಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಮಡಂತ್ಯಾರು ಕೃತಿ ಪೂಜಾರಿಗೆ ರಾಜ್ಯ ಮಟ್ಟದ “ಗಾನ ಸಿರಿ” ಪ್ರಶಸ್ತಿ

Suddi Udaya

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ಉಜಿರೆ :ಎಸ್ ಡಿ ಎಂ ಪ. ಪೂ. ಕಾಲೇಜಿನ ಎನ್ಎಸ್ಎಸ್  ಸ್ವಯಂ ಸೇವಕರಿಗೆ  ಪುನಃಶ್ಚೇತನ ತರಬೇತಿ ಕಾರ್ಯಾಗಾರ.

Suddi Udaya

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya
error: Content is protected !!