25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

ಉಜಿರೆ: ಆರೋಗ್ಯಕರ ಜೀವನಕ್ಕೆ ಕೈಯ ಶುಚಿತ್ವವೂ ಕೂಡ ಅತಿ ಮುಖ್ಯ. ಇತ್ತೀಚಿನ ವರದಿಯ ಪ್ರಕಾರ ಕೈಯ ಅಸುರಕ್ಷತೆಯಿಂದ ಪ್ರತಿ ವರ್ಷ 3.5 ಮಿಲಿಯನ್ ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಡಯೇರಿಯಾ ಹಾಗೂ ನ್ಯೂಮೆನಿಯಾದಂತಹ ಕಾಯಿಲೆಗಳು ಕೈ ತೊಳೆಯದೆ ಆಹಾರ ಸೇವಿಸುವುದರಿಂದ ಬರುತ್ತವೆ. ಈಗ ಕೊರೋನ ವೈರಸ್ ಕೂಡ ಸೇರ್ಪಡೆಯಾಗಿದೆ. ಕೈಯ ಅಸುರಕ್ಷತೆ ಬಗ್ಗೆ ಕಳವಳಗೊಂಡ ವಿಶ್ವ ಆರೋಗ್ಯ ಸಂಸ್ಥೆಯು 2008 ರಿಂದ ವಿಶ್ವ ಕೈ ತೊಳೆಯುವ ದಿನವನ್ನಾಗಿ ಘೋಷಿಸಿದೆ. ಇದೀಗ ಸುಮಾರು 70 ದೇಶಕ್ಕಿಂತಲೂ ಹೆಚ್ಚು ದೇಶಗಳಲ್ಲಿ ಕೈ ತೊಳೆಯುವ ದಿನದಂದು ವೈಜ್ಞಾನಿಕವಾಗಿ ಕೈ ತೊಳೆಯುವ ವಿಧಾನಗಳ ಬಗ್ಗೆ ತಿಳಿಸುವ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಕೈ ತೊಳೆಯುವ ದಿನಾಚರಣೆ ಪ್ರಯುಕ್ತ ವೈಜ್ಞಾನಿಕವಾಗಿ ಕೈ ತೊಳೆಯುವ ವಿಧಾನದ ಪ್ರಾತ್ಯಕ್ಷಿಕೆ ನಡೆಸಿ ಮಾತನಾಡಿದರು.

ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.
ಶ್ರೀಹರಿ ಹಾಗೂ ಗೌತಮಿ ಜಿ. ಪ್ರಾತ್ಯಕ್ಷಿಕೆಯಲ್ಲಿ ಭಾಗವಸಿದರು. ಘಟಕದ ನಾಯಕ ಆದಿತ್ಯ ವಿ. ಸ್ವಾಗತಿಸಿ , ವಂದಿಸಿದರು.

Related posts

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು: ಅನಾರೋಗ್ಯದಿಂದ ಬಳಲುತ್ತಿರುವ ಮಾನ್ಯಳ ಚಿಕಿತ್ಸೆಗೆ ಸ್ಪಂದನೆ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya

ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಜು.21 ರಿಂದ ಚಾತುರ್ಮಾಸ್ಯ ಆರಂಭ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya
error: Content is protected !!