July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

ಉಜಿರೆ: ಆರೋಗ್ಯಕರ ಜೀವನಕ್ಕೆ ಕೈಯ ಶುಚಿತ್ವವೂ ಕೂಡ ಅತಿ ಮುಖ್ಯ. ಇತ್ತೀಚಿನ ವರದಿಯ ಪ್ರಕಾರ ಕೈಯ ಅಸುರಕ್ಷತೆಯಿಂದ ಪ್ರತಿ ವರ್ಷ 3.5 ಮಿಲಿಯನ್ ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಡಯೇರಿಯಾ ಹಾಗೂ ನ್ಯೂಮೆನಿಯಾದಂತಹ ಕಾಯಿಲೆಗಳು ಕೈ ತೊಳೆಯದೆ ಆಹಾರ ಸೇವಿಸುವುದರಿಂದ ಬರುತ್ತವೆ. ಈಗ ಕೊರೋನ ವೈರಸ್ ಕೂಡ ಸೇರ್ಪಡೆಯಾಗಿದೆ. ಕೈಯ ಅಸುರಕ್ಷತೆ ಬಗ್ಗೆ ಕಳವಳಗೊಂಡ ವಿಶ್ವ ಆರೋಗ್ಯ ಸಂಸ್ಥೆಯು 2008 ರಿಂದ ವಿಶ್ವ ಕೈ ತೊಳೆಯುವ ದಿನವನ್ನಾಗಿ ಘೋಷಿಸಿದೆ. ಇದೀಗ ಸುಮಾರು 70 ದೇಶಕ್ಕಿಂತಲೂ ಹೆಚ್ಚು ದೇಶಗಳಲ್ಲಿ ಕೈ ತೊಳೆಯುವ ದಿನದಂದು ವೈಜ್ಞಾನಿಕವಾಗಿ ಕೈ ತೊಳೆಯುವ ವಿಧಾನಗಳ ಬಗ್ಗೆ ತಿಳಿಸುವ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಕೈ ತೊಳೆಯುವ ದಿನಾಚರಣೆ ಪ್ರಯುಕ್ತ ವೈಜ್ಞಾನಿಕವಾಗಿ ಕೈ ತೊಳೆಯುವ ವಿಧಾನದ ಪ್ರಾತ್ಯಕ್ಷಿಕೆ ನಡೆಸಿ ಮಾತನಾಡಿದರು.

ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.
ಶ್ರೀಹರಿ ಹಾಗೂ ಗೌತಮಿ ಜಿ. ಪ್ರಾತ್ಯಕ್ಷಿಕೆಯಲ್ಲಿ ಭಾಗವಸಿದರು. ಘಟಕದ ನಾಯಕ ಆದಿತ್ಯ ವಿ. ಸ್ವಾಗತಿಸಿ , ವಂದಿಸಿದರು.

Related posts

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿಗೆ ಶೇ.97.27 ಫಲಿತಾಂಶ : ತುಷಾರ ಬಿ.ಎಸ್ ರಾಜ್ಯಕ್ಕೆ 5 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya

ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

Suddi Udaya

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya
error: Content is protected !!