23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

ಉಜಿರೆ: ಆರೋಗ್ಯಕರ ಜೀವನಕ್ಕೆ ಕೈಯ ಶುಚಿತ್ವವೂ ಕೂಡ ಅತಿ ಮುಖ್ಯ. ಇತ್ತೀಚಿನ ವರದಿಯ ಪ್ರಕಾರ ಕೈಯ ಅಸುರಕ್ಷತೆಯಿಂದ ಪ್ರತಿ ವರ್ಷ 3.5 ಮಿಲಿಯನ್ ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಡಯೇರಿಯಾ ಹಾಗೂ ನ್ಯೂಮೆನಿಯಾದಂತಹ ಕಾಯಿಲೆಗಳು ಕೈ ತೊಳೆಯದೆ ಆಹಾರ ಸೇವಿಸುವುದರಿಂದ ಬರುತ್ತವೆ. ಈಗ ಕೊರೋನ ವೈರಸ್ ಕೂಡ ಸೇರ್ಪಡೆಯಾಗಿದೆ. ಕೈಯ ಅಸುರಕ್ಷತೆ ಬಗ್ಗೆ ಕಳವಳಗೊಂಡ ವಿಶ್ವ ಆರೋಗ್ಯ ಸಂಸ್ಥೆಯು 2008 ರಿಂದ ವಿಶ್ವ ಕೈ ತೊಳೆಯುವ ದಿನವನ್ನಾಗಿ ಘೋಷಿಸಿದೆ. ಇದೀಗ ಸುಮಾರು 70 ದೇಶಕ್ಕಿಂತಲೂ ಹೆಚ್ಚು ದೇಶಗಳಲ್ಲಿ ಕೈ ತೊಳೆಯುವ ದಿನದಂದು ವೈಜ್ಞಾನಿಕವಾಗಿ ಕೈ ತೊಳೆಯುವ ವಿಧಾನಗಳ ಬಗ್ಗೆ ತಿಳಿಸುವ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಕೈ ತೊಳೆಯುವ ದಿನಾಚರಣೆ ಪ್ರಯುಕ್ತ ವೈಜ್ಞಾನಿಕವಾಗಿ ಕೈ ತೊಳೆಯುವ ವಿಧಾನದ ಪ್ರಾತ್ಯಕ್ಷಿಕೆ ನಡೆಸಿ ಮಾತನಾಡಿದರು.

ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.
ಶ್ರೀಹರಿ ಹಾಗೂ ಗೌತಮಿ ಜಿ. ಪ್ರಾತ್ಯಕ್ಷಿಕೆಯಲ್ಲಿ ಭಾಗವಸಿದರು. ಘಟಕದ ನಾಯಕ ಆದಿತ್ಯ ವಿ. ಸ್ವಾಗತಿಸಿ , ವಂದಿಸಿದರು.

Related posts

ವಿಶ್ವದಾಖಲೆ ಖ್ಯಾತಿಯ ಡೇವಿಡ್ ಜೈಮಿ ರವರ ಮನೆಗೆ ನೆಲ್ಯಾಡಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ಭಾಷಣ ಸ್ಪರ್ಧೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

Suddi Udaya
error: Content is protected !!