25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

ಉಜಿರೆ : ಮಾಡುವ ಕೆಲಸದಲ್ಲಿ ತೃಪ್ತಿ, ಆ ಕೆಲಸದ ಕುರಿತು ಆಳವಾದ ಅರಿವು ಹಾಗೂ ಜೀವನದಲ್ಲಿ ಶಿಸ್ತು, ಸಮಯಪ್ರಜ್ಞೆ ಇರುವುದು ಅಗತ್ಯ ಎಂದು ಹಿರಿಯ ಸಾಹಿತಿ, ನಿವೃತ್ತ ಇಂಜಿನಿಯರ್ ಕುಮಾರಸ್ವಾಮಿ ಟಿ. ಹೇಳಿದರು.

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ಸರಣಿ ‘ಎಸ್ ಡಿ ಎಂ ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮದಲ್ಲಿ ಅವರು ಪ್ರತಿಭಾನ್ವಿತ ವಿದ್ಯಾರ್ಥಿ ನಿತಿನ್ ಎಸ್.ಜೆ. (ದ್ವಿತೀಯ ಬಿ.ಎ.) ಅವರಿಗೆ 5,000 ರೂ. ಸಹಾಯಧನ ಹಸ್ತಾಂತರಿಸಿ ಮಾತನಾಡಿದರು.
“ತೃಪ್ತಿ ಇದ್ದಲ್ಲಿ ನಾವು ಭ್ರಷ್ಟಾಚಾರಕ್ಕೆ ಒಳಗಾಗದೆ ಬದುಕಬಹುದು. ಏನನ್ನಾದಾರೂ ಸಾಧಿಸಬೇಕಾದರೆ ಮೊದಲು ಅಹಂಕಾರ ಬಿಡಬೇಕು. ಹಾಗಿದ್ದಾಗ ಸಾಧಿಸುವ ಅವಕಾಶಗಳು ಹೇರಳವಾಗಿ ದೊರೆಯುತ್ತವೆ. ಶಿಸ್ತು ಇತ್ಯಾದಿ ಮೌಲ್ಯಗಳಿದ್ದಾಗ ಯಶಸ್ಸು ಸಾಧ್ಯವಾಗುತ್ತದೆ” ಎಂದು ಅವರು ಕಿವಿಮಾತು ಹೇಳಿದರು.


ಸಿದ್ಧವನ ಗುರುಕುಲದಲ್ಲಿ ತಾವು ಕಳೆದ ದಿನಗಳನ್ನು ಮೆಲುಕು ಹಾಕಿದ ಅವರು, “ಸಾಮರಸ್ಯ, ಸಹಬಾಳ್ವೆಯಂತಹ ಮೌಲ್ಯಗಳನ್ನು ಸಿದ್ಧವನ ಕಲಿಸಿದೆ, ಉತ್ತಮ ಗೆಳೆಯರನ್ನು ನೀಡಿದೆ” ಎಂದರು.


ಜೀವನ ಕೇವಲ 60 ವರ್ಷಗಳವರೆಗೆ ಅಲ್ಲ. ಅದರ ಮೇಲೂ ಇದೆ. ಯೋಗಾಭ್ಯಾಸ, ಓದು ಇತ್ಯಾದಿ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡರೆ ವಿಶ್ರಾಂತ ಜೀವನದಲ್ಲಿ ಅವು ನೆರವಾಗುತ್ತವೆ ಎಂದು ಅವರು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪ ಪ್ರಾಂಶುಪಾಲ ಎಸ್. ಎನ್. ಕಾಕತ್ಕರ್, “ಯಾವುದೇ ಶಿಕ್ಷಣ ಸಂಸ್ಥೆ ಬೆಳೆಯಬೇಕಾದರೆ ಉತ್ತಮ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು, ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳು ಅಗತ್ಯ. ನಮ್ಮ ಕಾಲೇಜಿನಲ್ಲಿ ಈ ಎಲ್ಲ ಅಂಶಗಳೂ ಸಾಂಸ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುತ್ತಿವೆ. ಹಳೆ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ವಿತರಣೆ, ಬಿಸಿಯೂಟ ಯೋಜನೆಗೆ ಆರ್ಥಿಕ ನೆರವು ಇತ್ಯಾದಿ ಕಾರ್ಯಗಳನ್ನು ಮಾಡುತ್ತಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.


ಕಾರ್ಯಕ್ರಮ ಸಂಯೋಜಕ ಡಾ. ಎಂ. ಪಿ. ಶ್ರೀನಾಥ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪ್ರಾಧ್ಯಾಪಕ ಗುರುರಾಜ್ ಭಟ್ ವಂದಿಸಿದರು.

Related posts

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

Suddi Udaya

ಸುಲ್ಕೇರಿ: ಬಿಲ್ಲವ ಸಂಘದಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

Suddi Udaya

ನೂತನ ಉಪರಾಷ್ಟ್ರಪತಿಯಾಗಿ ಎ ನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್

Suddi Udaya

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

Suddi Udaya
error: Content is protected !!