23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಜೆಸಿ ಭವನದಲ್ಲಿ ಸಂವಹನ ಕಲೆ ಮತ್ತು ಅವಕಾಶಗಳನ್ನು ಬಳಸಿಕೊಳ್ಳುವ ಬಗ್ಗೆ ಸದಸ್ಯರಿಗೆ ತರಬೇತಿಯನ್ನು ನಡೆಸಲಾಯಿತು.

ಜೆಸಿಐಯ ಪ್ರಾವಿಷನಲ್ ವಲಯ ತರಬೇತುದಾರರಾದ ಜೆಸಿಐ ಮುಂಡ್ಕುರು ಭಾರ್ಗವ ಘಟಕದ ಪೂರ್ವ ಅಧ್ಯಕ್ಷರು, ವಲಯ ಹದಿನೈದರ ಲೇಡಿ ಜೆಸಿ ವಿಭಾಗದ ಸಂಯೋಜಕರಾದ ಮಾಲತಿ ಉಮೇಶ್ ಹಾಗೂ ಜೆಸಿಐ ಮಂಗಳೂರು ಸಾಮ್ರಾಟ್ ಘಟಕದ ಸದಸ್ಯರು, ಯುವ ಉದ್ಯಮಿ ವರುಣ್ ಪ್ರಭುರವರು ತರಬೇತಿಯನ್ನು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್.ಡಿ ಸ್ವಾಗತಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

ಘಟಕದ ಪೂರ್ವಾಧ್ಯಕ್ಷರಾದ ಪ್ರಶಾಂತ್ ಲಾಯಿಲ ತರಬೇತಿಯ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು ಹಾಗೂ ತರಬೇತುದಾರರನ್ನು ಘಟಕದ ಪರವಾಗಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜೆಸಿಐ ಮುಂಡ್ಕುರ್ ಭಾರ್ಗವ ಘಟಕದ ಅಧ್ಯಕ್ಷರಾದ ಗಣೇಶ್ ಆಚಾರ್ಯ, ಬೆಳ್ತಂಗಡಿ ಘಟಕದ ಪೂರ್ವಾಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ಚಿದಾನಂದ ಇಡ್ಯಾ, ಲೇಡಿ ಜೆಸಿ ಸಂಯೋಜಕರಾದ ಶ್ರುತಿರಂಜಿತ್, ಉಪಾಧ್ಯಕ್ಷರಾದ ಶೈಲೇಶ್, ಜೆಜೆಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್, ಅಕ್ಷಯ್ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

ವೇದಿಕೆ ಆಹ್ವಾನವನ್ನು ಉಪಾಧ್ಯಕ್ಷರಾದ ಆಶಾ ಪ್ರಶಾಂತ್, ತರಬೇತುದಾರರ ಪರಿಚಯವನ್ನು ಕಾರ್ಯದರ್ಶಿ ಅನುದೀಪ್ ಜೈನ್ ಹಾಗೂ ಉಪಾಧ್ಯಕ್ಷರಾದ ಚಂದ್ರಹಾಸ್ ಬಳಂಜರವರು ಮಾಡಿದರು.

Related posts

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಬಳಂಜ : 90 ವರ್ಷದ ವೆಂಕಮ್ಮ ರವರಿಂದ ಮತ ಚಲಾವಣೆ

Suddi Udaya

ಬಳಂಜ: ಸನಾತನ ಸಂಸ್ಥೆಯಿಂದ ವಿಶೇಷ ಪ್ರವಚನ

Suddi Udaya

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya
error: Content is protected !!