25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

ಬೆಳ್ತಂಗಡಿ ತಾಲೂಕಿನ ರೈತ ಬಾಂಧವರ ಗಮನಕ್ಕೆ ತಾಲೂಕಿನ ಪ್ರಮುಖ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು, ಕಾಳುಮೆಣಸು ಹಾಗೂ ಕೋಕೋ ಬೆಳೆಗಳಿಗೆ ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಹಾಗೂ ಪೋಷಕಾಂಶಗಳ ನಿರ್ವಹಣೆ ಕೊರತೆಯಿಂದಾಗಿ ಕೀಟ ಮತ್ತು ರೋಗಗಳ ಬಾಧೆ ತೀವ್ರಗೊಂಡು ರೈತರು ಆರ್ಥಿಕ ನಷ್ಟ ಅನುಭವಿಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ.

2024-25ನೇ ಸಾಲಿನ ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ ಯೋಜನೆಯಡಿ ಶೇ 75ರ ರಿಯಾಯಿತಿ ದರದಲ್ಲಿ ಈ ಕೆಳಕಂಡ ಔಷಧಿಗಳು ಲಭ್ಯವಿದ್ದು ರೈತರು ಸದುಪಯೋಗಪಡಿಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಕೋರಿದೆ. ಶಿಲೀಂದ್ರದಿಂದ ಉದ್ಭವಿಸುವ ರೋಗಗಳಿಗೆ Mancozeb 75% WP (2 ಗ್ರಾಂ/ಲೀ) ಮತ್ತು Propiconazole 25% EC (1 ml/ಲೀ) ಹಾಗೂ ರಸ ಹೀರುವ ಕೀಟಗಳ ಆತೋಟಿಗಾಗಿ Thiamethoxam 25% WG( 0.25 ml/ಲೀ) ಸಿಂಪಡಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ ಬೆಳ್ತಂಗಡಿ ಹೋಬಳಿ ಮಹಾವೀರ ಶೇಬಣ್ಣವರ ನೇ, ಮೊಬೈಲ್ ನಂ: 8123921087 ವೇಣೂರು ಹೋಬಳಿ ಭೀಮರಾಯ ಸೊಡ್ಡಗಿ, ಮೊಬೈಲ್ ನಂ: 9741713598 , ಕೊಕ್ಕಡ ಹೋಬಳಿ ಮಲ್ಲಿನಾಥ ಬಿರಾದಾರ ಮೊ.ನಂ. 9986411477ಮ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್ ಮೊ.ನಂ. 9448336863 .

Related posts

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

Suddi Udaya

ಸರಗಳ್ಳತನದ ಆರೋಪಿಯನ್ನು ಬಂಧಿಸಿ, ರೂ 5,05,000 ಮೌಲ್ಯದ ಸೊತ್ತನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

Suddi Udaya

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!