September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

ಬೆಳ್ತಂಗಡಿ ತಾಲೂಕಿನ ರೈತ ಬಾಂಧವರ ಗಮನಕ್ಕೆ ತಾಲೂಕಿನ ಪ್ರಮುಖ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು, ಕಾಳುಮೆಣಸು ಹಾಗೂ ಕೋಕೋ ಬೆಳೆಗಳಿಗೆ ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಹಾಗೂ ಪೋಷಕಾಂಶಗಳ ನಿರ್ವಹಣೆ ಕೊರತೆಯಿಂದಾಗಿ ಕೀಟ ಮತ್ತು ರೋಗಗಳ ಬಾಧೆ ತೀವ್ರಗೊಂಡು ರೈತರು ಆರ್ಥಿಕ ನಷ್ಟ ಅನುಭವಿಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ.

2024-25ನೇ ಸಾಲಿನ ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ ಯೋಜನೆಯಡಿ ಶೇ 75ರ ರಿಯಾಯಿತಿ ದರದಲ್ಲಿ ಈ ಕೆಳಕಂಡ ಔಷಧಿಗಳು ಲಭ್ಯವಿದ್ದು ರೈತರು ಸದುಪಯೋಗಪಡಿಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಕೋರಿದೆ. ಶಿಲೀಂದ್ರದಿಂದ ಉದ್ಭವಿಸುವ ರೋಗಗಳಿಗೆ Mancozeb 75% WP (2 ಗ್ರಾಂ/ಲೀ) ಮತ್ತು Propiconazole 25% EC (1 ml/ಲೀ) ಹಾಗೂ ರಸ ಹೀರುವ ಕೀಟಗಳ ಆತೋಟಿಗಾಗಿ Thiamethoxam 25% WG( 0.25 ml/ಲೀ) ಸಿಂಪಡಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ ಬೆಳ್ತಂಗಡಿ ಹೋಬಳಿ ಮಹಾವೀರ ಶೇಬಣ್ಣವರ ನೇ, ಮೊಬೈಲ್ ನಂ: 8123921087 ವೇಣೂರು ಹೋಬಳಿ ಭೀಮರಾಯ ಸೊಡ್ಡಗಿ, ಮೊಬೈಲ್ ನಂ: 9741713598 , ಕೊಕ್ಕಡ ಹೋಬಳಿ ಮಲ್ಲಿನಾಥ ಬಿರಾದಾರ ಮೊ.ನಂ. 9986411477ಮ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್ ಮೊ.ನಂ. 9448336863 .

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಉರುವಾಲು: ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!