22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

ಬೆಳ್ತಂಗಡಿ ತಾಲೂಕಿನ ರೈತ ಬಾಂಧವರ ಗಮನಕ್ಕೆ ತಾಲೂಕಿನ ಪ್ರಮುಖ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು, ಕಾಳುಮೆಣಸು ಹಾಗೂ ಕೋಕೋ ಬೆಳೆಗಳಿಗೆ ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಹಾಗೂ ಪೋಷಕಾಂಶಗಳ ನಿರ್ವಹಣೆ ಕೊರತೆಯಿಂದಾಗಿ ಕೀಟ ಮತ್ತು ರೋಗಗಳ ಬಾಧೆ ತೀವ್ರಗೊಂಡು ರೈತರು ಆರ್ಥಿಕ ನಷ್ಟ ಅನುಭವಿಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ.

2024-25ನೇ ಸಾಲಿನ ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ ಯೋಜನೆಯಡಿ ಶೇ 75ರ ರಿಯಾಯಿತಿ ದರದಲ್ಲಿ ಈ ಕೆಳಕಂಡ ಔಷಧಿಗಳು ಲಭ್ಯವಿದ್ದು ರೈತರು ಸದುಪಯೋಗಪಡಿಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಕೋರಿದೆ. ಶಿಲೀಂದ್ರದಿಂದ ಉದ್ಭವಿಸುವ ರೋಗಗಳಿಗೆ Mancozeb 75% WP (2 ಗ್ರಾಂ/ಲೀ) ಮತ್ತು Propiconazole 25% EC (1 ml/ಲೀ) ಹಾಗೂ ರಸ ಹೀರುವ ಕೀಟಗಳ ಆತೋಟಿಗಾಗಿ Thiamethoxam 25% WG( 0.25 ml/ಲೀ) ಸಿಂಪಡಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ ಬೆಳ್ತಂಗಡಿ ಹೋಬಳಿ ಮಹಾವೀರ ಶೇಬಣ್ಣವರ ನೇ, ಮೊಬೈಲ್ ನಂ: 8123921087 ವೇಣೂರು ಹೋಬಳಿ ಭೀಮರಾಯ ಸೊಡ್ಡಗಿ, ಮೊಬೈಲ್ ನಂ: 9741713598 , ಕೊಕ್ಕಡ ಹೋಬಳಿ ಮಲ್ಲಿನಾಥ ಬಿರಾದಾರ ಮೊ.ನಂ. 9986411477ಮ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್ ಮೊ.ನಂ. 9448336863 .

Related posts

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದಲ್ಲಿ ಸೇವೆ ಸಲ್ಲಿಸಿದವರಿಗೆ ಅಭಿನಂದನಾ ಸಭೆ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮೇ 8: ಮಾಜಿ ಜಿ.ಪಂ. ಉಪಾಧ್ಯಕ್ಷ ತುಂಗಪ್ಪ ಬಂಗೇರರ ನೇತೃತ್ವದಲ್ಲಿ ಬಿ.ಎಸ್. ಯಡಿಯೂರಪ್ಪ ‘ಅಭಿಮಾನೋತ್ಸವ’ ಕಾರ್ಯಕ್ರಮ

Suddi Udaya

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ

Suddi Udaya

ಕೊಯ್ಯೂರು ಮಲೆಬೆಟ್ಟು ನಿವಾಸಿ ರಮ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!