24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆಯು ಮೊದಲ ಬಾರಿಗೆ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಹಾಗೂ ನಿಡ್ಲೆ ಅಗ್ರೀಲೀಫ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ “ಹೇ ಶಾರದೆ” ಫೋಟೊ ಸ್ಪರ್ಧೆ” ಆಯೋಜಿಸಿತ್ತು.

ಇದರ ಫಲಿತಾಂಶವು ಪ್ರಕಟಗೊಂಡಿದ್ದು ಪ್ರಥಮ ಬಹುಮಾನವನ್ನು ಶಾರ್ವಿ ಶೆಟ್ಟಿ ಸುಮುಖ ಸದನ ಕರ್ನೋಡಿ, ದ್ವಿತೀಯ ಬಹುಮಾನವನ್ನು ಓಶ್ಮಿ ಜಿ. ಅಕ್ಕಳ ಮನೆ ಪುತ್ತಿಲ, ತೃತೀಯ ಬಹುಮಾನವನ್ನು ದೀಕ್ಷಿತಾ ಶಿವಾಜಿನಗರ ಲಾಯಿಲ ಇವರು ಪಡೆದುಕೊಂಡಿದ್ದಾರೆ.

ಈ ಹಿಂದೆ ಎರಡು ಬಾರಿ ರಾಧೇ-ಕೃಷ್ಣ ಫೋಟೋ ಸ್ಪರ್ಧೆಯನ್ನು ಬೆಳ್ತಂಗಡಿ ತಾಲೂಕಿನವರಿಗೆ ಆಯೋಜಿಸಿದಾಗ ಹಲವಾರು ತಾಲೂಕಿನ ಹೊರಗಡೆ ಇರುವ ಪತ್ರಿಕೆ ಹಾಗೂ ಆನ್‌ಲೈನ್ ಓದುಗರಿಂದ ನಮಗೂ ಒಂದು ಅವಕಾಶ ನೀಡಿ ಎಂಬ ಬೇಡಿಕೆಯಂತೆ “ಹೇ ಶಾರದೇ” ಎಂಬ ಶಾರದಾ ಫೋಟೋ ಸ್ಪರ್ಧೆ ಆಯೋಜಿಸಿದ್ದು ಅದರಂತೆ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ, ಮಂಗಳೂರು, ಕಾರ್ಕಳದಿಂದ ಇನ್ನೂರಕ್ಕೂ ಮಿಕ್ಕಿ ಫೋಟೋಗಳು ಬಂದಿರುತ್ತದೆ. ಈ ಫೋಟೋ ಸ್ಪರ್ಧೆಯಲ್ಲಿ ಉಜಿರೆ ರಶ್ಮಿ ಸ್ಟುಡಿಯೋದ ರಾಮಕೃಷ್ಣ ರೈ ರವರು ತೀರ್ಪುಗಾರರಾಗಿದ್ದರು.

Related posts

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

Suddi Udaya

ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆ: ನಡ ಪದವಿ ಪೂರ್ವ ಕಾಲೇಜಿಗೆ ಬಹುಮಾನ

Suddi Udaya
error: Content is protected !!