32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆಯು ಮೊದಲ ಬಾರಿಗೆ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಹಾಗೂ ನಿಡ್ಲೆ ಅಗ್ರೀಲೀಫ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ “ಹೇ ಶಾರದೆ” ಫೋಟೊ ಸ್ಪರ್ಧೆ” ಆಯೋಜಿಸಿತ್ತು.

ಇದರ ಫಲಿತಾಂಶವು ಪ್ರಕಟಗೊಂಡಿದ್ದು ಪ್ರಥಮ ಬಹುಮಾನವನ್ನು ಶಾರ್ವಿ ಶೆಟ್ಟಿ ಸುಮುಖ ಸದನ ಕರ್ನೋಡಿ, ದ್ವಿತೀಯ ಬಹುಮಾನವನ್ನು ಓಶ್ಮಿ ಜಿ. ಅಕ್ಕಳ ಮನೆ ಪುತ್ತಿಲ, ತೃತೀಯ ಬಹುಮಾನವನ್ನು ದೀಕ್ಷಿತಾ ಶಿವಾಜಿನಗರ ಲಾಯಿಲ ಇವರು ಪಡೆದುಕೊಂಡಿದ್ದಾರೆ.

ಈ ಹಿಂದೆ ಎರಡು ಬಾರಿ ರಾಧೇ-ಕೃಷ್ಣ ಫೋಟೋ ಸ್ಪರ್ಧೆಯನ್ನು ಬೆಳ್ತಂಗಡಿ ತಾಲೂಕಿನವರಿಗೆ ಆಯೋಜಿಸಿದಾಗ ಹಲವಾರು ತಾಲೂಕಿನ ಹೊರಗಡೆ ಇರುವ ಪತ್ರಿಕೆ ಹಾಗೂ ಆನ್‌ಲೈನ್ ಓದುಗರಿಂದ ನಮಗೂ ಒಂದು ಅವಕಾಶ ನೀಡಿ ಎಂಬ ಬೇಡಿಕೆಯಂತೆ “ಹೇ ಶಾರದೇ” ಎಂಬ ಶಾರದಾ ಫೋಟೋ ಸ್ಪರ್ಧೆ ಆಯೋಜಿಸಿದ್ದು ಅದರಂತೆ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ, ಮಂಗಳೂರು, ಕಾರ್ಕಳದಿಂದ ಇನ್ನೂರಕ್ಕೂ ಮಿಕ್ಕಿ ಫೋಟೋಗಳು ಬಂದಿರುತ್ತದೆ. ಈ ಫೋಟೋ ಸ್ಪರ್ಧೆಯಲ್ಲಿ ಉಜಿರೆ ರಶ್ಮಿ ಸ್ಟುಡಿಯೋದ ರಾಮಕೃಷ್ಣ ರೈ ರವರು ತೀರ್ಪುಗಾರರಾಗಿದ್ದರು.

Related posts

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ಕಳೆಂಜ ರಾಜೇಶ್ ಎಂ.ಕೆ ರವರ ಪೋಕ್ಸೋ ಪ್ರಕರಣ: ಅಪ್ರಾಪ್ತ ವಯಸ್ಕಳ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ಕಾನೂನು ವ್ಯವಸ್ಥೆಯ ದುರ್ಬಳಕೆ ಮಾಡಿದ ಬಗ್ಗೆ ಮಂಗಳೂರು ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಕಳೆಂಜ ಗ್ರಾಮಸ್ಥರಿಂದ ಮನವಿ

Suddi Udaya
error: Content is protected !!