25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

ಉಜಿರೆ: ಆರೋಗ್ಯಕರ ಜೀವನಕ್ಕೆ ಕೈಯ ಶುಚಿತ್ವವೂ ಕೂಡ ಅತಿ ಮುಖ್ಯ. ಇತ್ತೀಚಿನ ವರದಿಯ ಪ್ರಕಾರ ಕೈಯ ಅಸುರಕ್ಷತೆಯಿಂದ ಪ್ರತಿ ವರ್ಷ 3.5 ಮಿಲಿಯನ್ ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಡಯೇರಿಯಾ ಹಾಗೂ ನ್ಯೂಮೆನಿಯಾದಂತಹ ಕಾಯಿಲೆಗಳು ಕೈ ತೊಳೆಯದೆ ಆಹಾರ ಸೇವಿಸುವುದರಿಂದ ಬರುತ್ತವೆ. ಈಗ ಕೊರೋನ ವೈರಸ್ ಕೂಡ ಸೇರ್ಪಡೆಯಾಗಿದೆ. ಕೈಯ ಅಸುರಕ್ಷತೆ ಬಗ್ಗೆ ಕಳವಳಗೊಂಡ ವಿಶ್ವ ಆರೋಗ್ಯ ಸಂಸ್ಥೆಯು 2008 ರಿಂದ ವಿಶ್ವ ಕೈ ತೊಳೆಯುವ ದಿನವನ್ನಾಗಿ ಘೋಷಿಸಿದೆ. ಇದೀಗ ಸುಮಾರು 70 ದೇಶಕ್ಕಿಂತಲೂ ಹೆಚ್ಚು ದೇಶಗಳಲ್ಲಿ ಕೈ ತೊಳೆಯುವ ದಿನದಂದು ವೈಜ್ಞಾನಿಕವಾಗಿ ಕೈ ತೊಳೆಯುವ ವಿಧಾನಗಳ ಬಗ್ಗೆ ತಿಳಿಸುವ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಕೈ ತೊಳೆಯುವ ದಿನಾಚರಣೆ ಪ್ರಯುಕ್ತ ವೈಜ್ಞಾನಿಕವಾಗಿ ಕೈ ತೊಳೆಯುವ ವಿಧಾನದ ಪ್ರಾತ್ಯಕ್ಷಿಕೆ ನಡೆಸಿ ಮಾತನಾಡಿದರು.

ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.
ಶ್ರೀಹರಿ ಹಾಗೂ ಗೌತಮಿ ಜಿ. ಪ್ರಾತ್ಯಕ್ಷಿಕೆಯಲ್ಲಿ ಭಾಗವಸಿದರು. ಘಟಕದ ನಾಯಕ ಆದಿತ್ಯ ವಿ. ಸ್ವಾಗತಿಸಿ , ವಂದಿಸಿದರು.

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ವಾರ್ಷಿಕ ವ್ಯವಹಾರ ರೂ.300 ಕೋಟಿ – ಲಾಭ ರೂ.1.13 ಕೋಟಿ – ಶೇ.16 ಡಿವಿಡೆಂಟ್

Suddi Udaya

ಚಾರ್ಮಾಡಿ: ಭಾರೀ ಗಾಳಿ ಮಳೆಗೆ ಕುಸಿದ ಮನೆ

Suddi Udaya

ಮಾ.28: ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಕಾಸರಗೋಡು – ಕರ್ನಾಟಕ ಚುಟುಕು ಕವಿಗೋಷ್ಠಿ

Suddi Udaya

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!