July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

ಉಜಿರೆ: ಆರೋಗ್ಯಕರ ಜೀವನಕ್ಕೆ ಕೈಯ ಶುಚಿತ್ವವೂ ಕೂಡ ಅತಿ ಮುಖ್ಯ. ಇತ್ತೀಚಿನ ವರದಿಯ ಪ್ರಕಾರ ಕೈಯ ಅಸುರಕ್ಷತೆಯಿಂದ ಪ್ರತಿ ವರ್ಷ 3.5 ಮಿಲಿಯನ್ ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಡಯೇರಿಯಾ ಹಾಗೂ ನ್ಯೂಮೆನಿಯಾದಂತಹ ಕಾಯಿಲೆಗಳು ಕೈ ತೊಳೆಯದೆ ಆಹಾರ ಸೇವಿಸುವುದರಿಂದ ಬರುತ್ತವೆ. ಈಗ ಕೊರೋನ ವೈರಸ್ ಕೂಡ ಸೇರ್ಪಡೆಯಾಗಿದೆ. ಕೈಯ ಅಸುರಕ್ಷತೆ ಬಗ್ಗೆ ಕಳವಳಗೊಂಡ ವಿಶ್ವ ಆರೋಗ್ಯ ಸಂಸ್ಥೆಯು 2008 ರಿಂದ ವಿಶ್ವ ಕೈ ತೊಳೆಯುವ ದಿನವನ್ನಾಗಿ ಘೋಷಿಸಿದೆ. ಇದೀಗ ಸುಮಾರು 70 ದೇಶಕ್ಕಿಂತಲೂ ಹೆಚ್ಚು ದೇಶಗಳಲ್ಲಿ ಕೈ ತೊಳೆಯುವ ದಿನದಂದು ವೈಜ್ಞಾನಿಕವಾಗಿ ಕೈ ತೊಳೆಯುವ ವಿಧಾನಗಳ ಬಗ್ಗೆ ತಿಳಿಸುವ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಕೈ ತೊಳೆಯುವ ದಿನಾಚರಣೆ ಪ್ರಯುಕ್ತ ವೈಜ್ಞಾನಿಕವಾಗಿ ಕೈ ತೊಳೆಯುವ ವಿಧಾನದ ಪ್ರಾತ್ಯಕ್ಷಿಕೆ ನಡೆಸಿ ಮಾತನಾಡಿದರು.

ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.
ಶ್ರೀಹರಿ ಹಾಗೂ ಗೌತಮಿ ಜಿ. ಪ್ರಾತ್ಯಕ್ಷಿಕೆಯಲ್ಲಿ ಭಾಗವಸಿದರು. ಘಟಕದ ನಾಯಕ ಆದಿತ್ಯ ವಿ. ಸ್ವಾಗತಿಸಿ , ವಂದಿಸಿದರು.

Related posts

ಜ್ಯೋತಿ ಆಸ್ಪತ್ರೆ ಆಶ್ರಯದಲ್ಲಿ ಜೀವ ರಕ್ಷಕದ ಮಾಹಿತಿ ಕಾರ್ಯಕ್ರಮ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಗ್ರಾಮ ಸಭೆ: ಗರ್ಭಿಣಿಯರು, ಬೆನ್ನುನೋವಿದ್ದರು ಈ ರಸ್ತೆಯಲ್ಲಿ ಸಾಗಿದರೆ ಸಮಸ್ಯೆ ಗ್ಯಾರಂಟಿ

Suddi Udaya

ಉಜಿರೆ: ರುಡ್‌ಸೆಟ್ ನಲ್ಲಿ FLC-CRP ತರಬೇತಿ ಸಮಾರೋಪ

Suddi Udaya

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ರೈತ ಸದಸ್ಯರ ಅವಶ್ಯಕತೆಗಳನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ: ಎನ್ ಸುಧಾಕರ ಭಂಡಾರಿ ರೂ 272.37 ಕೋಟಿ ವ್ಯವಹಾರ,ರೂ. 89 ಲಕ್ಷ ಲಾಭ, ಸದಸ್ಯರಿಗೆ ಶೇ 12 ಡಿವಿಡೆಂಟ್

Suddi Udaya

7ನೇ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ “ಪುರ್ಸ ಕಟ್ಟುನೆ: ಇನಿ-ಕೋಡೆ- ಎಲ್ಲೆ” ಆಯ್ಕೆ

Suddi Udaya
error: Content is protected !!