September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಜೆಸಿ ಭವನದಲ್ಲಿ ಸಂವಹನ ಕಲೆ ಮತ್ತು ಅವಕಾಶಗಳನ್ನು ಬಳಸಿಕೊಳ್ಳುವ ಬಗ್ಗೆ ಸದಸ್ಯರಿಗೆ ತರಬೇತಿಯನ್ನು ನಡೆಸಲಾಯಿತು.

ಜೆಸಿಐಯ ಪ್ರಾವಿಷನಲ್ ವಲಯ ತರಬೇತುದಾರರಾದ ಜೆಸಿಐ ಮುಂಡ್ಕುರು ಭಾರ್ಗವ ಘಟಕದ ಪೂರ್ವ ಅಧ್ಯಕ್ಷರು, ವಲಯ ಹದಿನೈದರ ಲೇಡಿ ಜೆಸಿ ವಿಭಾಗದ ಸಂಯೋಜಕರಾದ ಮಾಲತಿ ಉಮೇಶ್ ಹಾಗೂ ಜೆಸಿಐ ಮಂಗಳೂರು ಸಾಮ್ರಾಟ್ ಘಟಕದ ಸದಸ್ಯರು, ಯುವ ಉದ್ಯಮಿ ವರುಣ್ ಪ್ರಭುರವರು ತರಬೇತಿಯನ್ನು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್.ಡಿ ಸ್ವಾಗತಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

ಘಟಕದ ಪೂರ್ವಾಧ್ಯಕ್ಷರಾದ ಪ್ರಶಾಂತ್ ಲಾಯಿಲ ತರಬೇತಿಯ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು ಹಾಗೂ ತರಬೇತುದಾರರನ್ನು ಘಟಕದ ಪರವಾಗಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜೆಸಿಐ ಮುಂಡ್ಕುರ್ ಭಾರ್ಗವ ಘಟಕದ ಅಧ್ಯಕ್ಷರಾದ ಗಣೇಶ್ ಆಚಾರ್ಯ, ಬೆಳ್ತಂಗಡಿ ಘಟಕದ ಪೂರ್ವಾಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ಚಿದಾನಂದ ಇಡ್ಯಾ, ಲೇಡಿ ಜೆಸಿ ಸಂಯೋಜಕರಾದ ಶ್ರುತಿರಂಜಿತ್, ಉಪಾಧ್ಯಕ್ಷರಾದ ಶೈಲೇಶ್, ಜೆಜೆಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್, ಅಕ್ಷಯ್ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

ವೇದಿಕೆ ಆಹ್ವಾನವನ್ನು ಉಪಾಧ್ಯಕ್ಷರಾದ ಆಶಾ ಪ್ರಶಾಂತ್, ತರಬೇತುದಾರರ ಪರಿಚಯವನ್ನು ಕಾರ್ಯದರ್ಶಿ ಅನುದೀಪ್ ಜೈನ್ ಹಾಗೂ ಉಪಾಧ್ಯಕ್ಷರಾದ ಚಂದ್ರಹಾಸ್ ಬಳಂಜರವರು ಮಾಡಿದರು.

Related posts

ಬೆಳ್ತಂಗಡಿ ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya

ಕಳಿಯ ಗ್ರಾಮದ ಕೊರಂಜ ನಿವಾಸಿ ಜಯಪ್ರಕಾಶ್ ನಿಧನ

Suddi Udaya
error: Content is protected !!