July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಜೆಸಿ ಭವನದಲ್ಲಿ ಸಂವಹನ ಕಲೆ ಮತ್ತು ಅವಕಾಶಗಳನ್ನು ಬಳಸಿಕೊಳ್ಳುವ ಬಗ್ಗೆ ಸದಸ್ಯರಿಗೆ ತರಬೇತಿಯನ್ನು ನಡೆಸಲಾಯಿತು.

ಜೆಸಿಐಯ ಪ್ರಾವಿಷನಲ್ ವಲಯ ತರಬೇತುದಾರರಾದ ಜೆಸಿಐ ಮುಂಡ್ಕುರು ಭಾರ್ಗವ ಘಟಕದ ಪೂರ್ವ ಅಧ್ಯಕ್ಷರು, ವಲಯ ಹದಿನೈದರ ಲೇಡಿ ಜೆಸಿ ವಿಭಾಗದ ಸಂಯೋಜಕರಾದ ಮಾಲತಿ ಉಮೇಶ್ ಹಾಗೂ ಜೆಸಿಐ ಮಂಗಳೂರು ಸಾಮ್ರಾಟ್ ಘಟಕದ ಸದಸ್ಯರು, ಯುವ ಉದ್ಯಮಿ ವರುಣ್ ಪ್ರಭುರವರು ತರಬೇತಿಯನ್ನು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್.ಡಿ ಸ್ವಾಗತಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

ಘಟಕದ ಪೂರ್ವಾಧ್ಯಕ್ಷರಾದ ಪ್ರಶಾಂತ್ ಲಾಯಿಲ ತರಬೇತಿಯ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು ಹಾಗೂ ತರಬೇತುದಾರರನ್ನು ಘಟಕದ ಪರವಾಗಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜೆಸಿಐ ಮುಂಡ್ಕುರ್ ಭಾರ್ಗವ ಘಟಕದ ಅಧ್ಯಕ್ಷರಾದ ಗಣೇಶ್ ಆಚಾರ್ಯ, ಬೆಳ್ತಂಗಡಿ ಘಟಕದ ಪೂರ್ವಾಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ಚಿದಾನಂದ ಇಡ್ಯಾ, ಲೇಡಿ ಜೆಸಿ ಸಂಯೋಜಕರಾದ ಶ್ರುತಿರಂಜಿತ್, ಉಪಾಧ್ಯಕ್ಷರಾದ ಶೈಲೇಶ್, ಜೆಜೆಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್, ಅಕ್ಷಯ್ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

ವೇದಿಕೆ ಆಹ್ವಾನವನ್ನು ಉಪಾಧ್ಯಕ್ಷರಾದ ಆಶಾ ಪ್ರಶಾಂತ್, ತರಬೇತುದಾರರ ಪರಿಚಯವನ್ನು ಕಾರ್ಯದರ್ಶಿ ಅನುದೀಪ್ ಜೈನ್ ಹಾಗೂ ಉಪಾಧ್ಯಕ್ಷರಾದ ಚಂದ್ರಹಾಸ್ ಬಳಂಜರವರು ಮಾಡಿದರು.

Related posts

ಬಳಂಜ: ಪುಣ್ಕೆದೊಟ್ಟು ನಿವಾಸಿ ಚಂದ್ರು ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ವಿಜೃಂಭಣೆಯ ಎಕ್ಸೆಲ್ ಪರ್ಬ, ಪ್ರತಿಭಾ ಪುರಸ್ಕಾರ

Suddi Udaya

ರಾ. ಹೆ. ಕಾಮಗಾರಿ ಮಡಂತ್ಯಾರು ಪೇಟೆಯಲ್ಲಿ ಅಲ್ಲಲ್ಲಿ ತೆರೆದ ಚರಂಡಿ: ಸಾವಜನಿಕರ ಓಡಾಟಕ್ಕೆ ಅಡಚಣೆ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳಾಲು: ಪೆರಿಯಡ್ಕ ಶಾಲಾ ರಜತ ಮಹೋತ್ಸವ: ಪ್ರವೇಶ ದ್ವಾರ ಲೋಕಾರ್ಪಣೆ- ಸಭಾ ಕಾರ್ಯಕ್ರಮ

Suddi Udaya

35 ವರ್ಷಗಳ ಸೇವೆಗೆ ಗೌರವದ ವಿದಾಯ-ಉಜಿರೆ ರಬ್ಬರ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಗೆ ಆತ್ಮೀಯ ಬೀಳ್ಕೊಡುಗೆ

Suddi Udaya
error: Content is protected !!