25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

ಬೆಳ್ತಂಗಡಿ ತಾಲೂಕಿನ ರೈತ ಬಾಂಧವರ ಗಮನಕ್ಕೆ ತಾಲೂಕಿನ ಪ್ರಮುಖ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು, ಕಾಳುಮೆಣಸು ಹಾಗೂ ಕೋಕೋ ಬೆಳೆಗಳಿಗೆ ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಹಾಗೂ ಪೋಷಕಾಂಶಗಳ ನಿರ್ವಹಣೆ ಕೊರತೆಯಿಂದಾಗಿ ಕೀಟ ಮತ್ತು ರೋಗಗಳ ಬಾಧೆ ತೀವ್ರಗೊಂಡು ರೈತರು ಆರ್ಥಿಕ ನಷ್ಟ ಅನುಭವಿಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ.

2024-25ನೇ ಸಾಲಿನ ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ ಯೋಜನೆಯಡಿ ಶೇ 75ರ ರಿಯಾಯಿತಿ ದರದಲ್ಲಿ ಈ ಕೆಳಕಂಡ ಔಷಧಿಗಳು ಲಭ್ಯವಿದ್ದು ರೈತರು ಸದುಪಯೋಗಪಡಿಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಕೋರಿದೆ. ಶಿಲೀಂದ್ರದಿಂದ ಉದ್ಭವಿಸುವ ರೋಗಗಳಿಗೆ Mancozeb 75% WP (2 ಗ್ರಾಂ/ಲೀ) ಮತ್ತು Propiconazole 25% EC (1 ml/ಲೀ) ಹಾಗೂ ರಸ ಹೀರುವ ಕೀಟಗಳ ಆತೋಟಿಗಾಗಿ Thiamethoxam 25% WG( 0.25 ml/ಲೀ) ಸಿಂಪಡಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ ಬೆಳ್ತಂಗಡಿ ಹೋಬಳಿ ಮಹಾವೀರ ಶೇಬಣ್ಣವರ ನೇ, ಮೊಬೈಲ್ ನಂ: 8123921087 ವೇಣೂರು ಹೋಬಳಿ ಭೀಮರಾಯ ಸೊಡ್ಡಗಿ, ಮೊಬೈಲ್ ನಂ: 9741713598 , ಕೊಕ್ಕಡ ಹೋಬಳಿ ಮಲ್ಲಿನಾಥ ಬಿರಾದಾರ ಮೊ.ನಂ. 9986411477ಮ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್ ಮೊ.ನಂ. 9448336863 .

Related posts

ಸರ್ಕಾರ ಬಂದು ಎರಡು ವರ್ಷ ಆದರೂ ನಡೆಯದ‌ ತಾಲೂಕು ಕೆಡಿಪಿ ಸಭೆ: ತಾಲೂಕು ಪಂಚಾಯತ್ ಮುಂದೆ ಯುವ ಕಾಂಗ್ರೆಸ್ ಬೆಳ್ತಂಗಡಿ ಪ್ರತಿಭಟನೆ

Suddi Udaya

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ವೇಣೂರು: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ವತಿಯಿಂದ ಗುರು ನಮನ ಕಾರ್ಯಕ್ರಮ

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya
error: Content is protected !!