22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

ಬೆಳ್ತಂಗಡಿ ತಾಲೂಕಿನ ರೈತ ಬಾಂಧವರ ಗಮನಕ್ಕೆ ತಾಲೂಕಿನ ಪ್ರಮುಖ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು, ಕಾಳುಮೆಣಸು ಹಾಗೂ ಕೋಕೋ ಬೆಳೆಗಳಿಗೆ ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಹಾಗೂ ಪೋಷಕಾಂಶಗಳ ನಿರ್ವಹಣೆ ಕೊರತೆಯಿಂದಾಗಿ ಕೀಟ ಮತ್ತು ರೋಗಗಳ ಬಾಧೆ ತೀವ್ರಗೊಂಡು ರೈತರು ಆರ್ಥಿಕ ನಷ್ಟ ಅನುಭವಿಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ.

2024-25ನೇ ಸಾಲಿನ ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ ಯೋಜನೆಯಡಿ ಶೇ 75ರ ರಿಯಾಯಿತಿ ದರದಲ್ಲಿ ಈ ಕೆಳಕಂಡ ಔಷಧಿಗಳು ಲಭ್ಯವಿದ್ದು ರೈತರು ಸದುಪಯೋಗಪಡಿಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಕೋರಿದೆ. ಶಿಲೀಂದ್ರದಿಂದ ಉದ್ಭವಿಸುವ ರೋಗಗಳಿಗೆ Mancozeb 75% WP (2 ಗ್ರಾಂ/ಲೀ) ಮತ್ತು Propiconazole 25% EC (1 ml/ಲೀ) ಹಾಗೂ ರಸ ಹೀರುವ ಕೀಟಗಳ ಆತೋಟಿಗಾಗಿ Thiamethoxam 25% WG( 0.25 ml/ಲೀ) ಸಿಂಪಡಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಅಧಿಕಾರಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ ಬೆಳ್ತಂಗಡಿ ಹೋಬಳಿ ಮಹಾವೀರ ಶೇಬಣ್ಣವರ ನೇ, ಮೊಬೈಲ್ ನಂ: 8123921087 ವೇಣೂರು ಹೋಬಳಿ ಭೀಮರಾಯ ಸೊಡ್ಡಗಿ, ಮೊಬೈಲ್ ನಂ: 9741713598 , ಕೊಕ್ಕಡ ಹೋಬಳಿ ಮಲ್ಲಿನಾಥ ಬಿರಾದಾರ ಮೊ.ನಂ. 9986411477ಮ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್ ಮೊ.ನಂ. 9448336863 .

Related posts

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ತೋಟತ್ತಾಡಿ: ಪಾದೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪಿಸುವಂತೆ ಹೈನುಗಾರರಿಂದ ಸಭೆ

Suddi Udaya

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!